ದೆಹಲಿ: “ಒಂದೇ ವಾಕ್ಯದಲ್ಲಿ ಹೇಳಬೇಕಾದರೆ, ಸಮಯವೇ ಪ್ರತಿಯೊಂದಕ್ಕೂ ಉತ್ತರ ನೀಡುತ್ತದೆ” ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
ದೆಹಲಿಯ ಕರ್ನಾಟಕ ಭವನದ ಬಳಿ ಭಾನುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿದ ಕುರಿತು ಕೇಳಿದ ಪ್ರಶ್ನೆಗೆ, “ನಾನು ಅದನ್ನು ಬಹಿರಂಗಗೊಳಿಸುವ ಅಗತ್ಯವೇನು? ನಾವು ಇಲ್ಲಿಗೆ ಬರುವುದೇ ಸರ್ಕಾರದ ಕೆಲಸ, ಪಕ್ಷದ ಕೆಲಸ ಮತ್ತು ನಮ್ಮ ರಾಜಕೀಯಕ್ಕಾಗಿ” ಎಂದು ಪ್ರತಿಕ್ರಿಯಿಸಿದರು.
ತಾವು ದೆಹಲಿಯಲ್ಲಿ ಇದ್ದರೆಂದರೆ ಹೈಕಮಾಂಡ್ ಭೇಟಿ ಚರ್ಚೆಗಳು ರಾಜ್ಯದಲ್ಲಿ ನಡೆಯುತ್ತಿವೆ ಎಂಬ ಮಾತುಗಳ ಬಗ್ಗೆ ಕೇಳಿದಾಗ, “ನಾವು ರಾಜಕಾರಣಿಗಳು. ರಾಜಕಾರಣಿಗಳು ಮಾಡಬೇಕಾದ ರಾಜಕಾರಣವನ್ನು ಎಲ್ಲರೂ ಮಾಡುತ್ತಾರೆ. ಇದರಲ್ಲಿ ತಪ್ಪೇನಿಲ್ಲ. ನಮಗೆ ಅಗತ್ಯವಿರುವವರನ್ನು ಭೇಟಿ ಮಾಡುತ್ತೇವೆ. ಇದನ್ನು ಮಾಧ್ಯಮಗಳು ಏಕೆ ದೊಡ್ಡ ವಿಷಯವಾಗಿಸುತ್ತವೆ?” ಎಂದು ಪ್ರಶ್ನಿಸಿದರು.



