ಮೈಸೂರು: ಅದೃಷ್ಟ ಒಲಿದು ಬಂದಾಗ ಡಿಕೆಶಿ ಸಿಎಂ ಆಗುತ್ತಾರೆ ಎಂದು ಮಾಜಿ ಸಚಿವ ಜಿ.ಟಿ ದೇವೇಗೌಡ ಭವಿಷ್ಯ ನುಡಿದಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಸಿಎಂ ಆಗಿ ಸಿದ್ದರಾಮಯ್ಯ, ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ ಶಿವಕುಮಾರ್ ಇದ್ದಾರೆ.
Advertisement
ಕರ್ನಾಟಕದಲ್ಲಿ ಕಾಂಗ್ರೆಸ್ ಭಾರೀ ಗಟ್ಟಿಯಾಗಿದೆ. 138 ಸ್ಥಾನಗಳಿಂದ ಸುಭದ್ರವಾಗಿದೆ. ಅದೃಷ್ಟ ಒಲಿದು ಬಂದಾಗ ಡಿಕೆಶಿ ಸಿಎಂ ಆಗುತ್ತಾರೆ ಎಂದು ಹೇಳಿದ್ದಾರೆ. 1996 ರಿಂದ 2004ರ ವರೆಗೆ ಸಿದ್ದರಾಮಯ್ಯ ಸಿಎಂ ಆಗ್ತಾರೆ ಅನ್ಕೊಂಡು ಬಂದ್ರು ಅದು ಆಗಲಿಲ್ಲ.
ಈಗ ಡಿ.ಕೆ ಶಿವಕುಮಾರ್ ನಡೆ ಬಗ್ಗೆ ಹೆಚ್ಚಿನ ಬಗ್ಗೆ ನನಗೆ ಗೊತ್ತಿಲ್ಲ. ಆ ರಾಜಕೀಯದ ಬಗ್ಗೆ ನಾನು ಹೆಚ್ಚು ತಲೆಕೆಡಿಸಿಕೊಳ್ಳುತ್ತಿಲ್ಲ. ಈ ಬಗ್ಗೆ ಡಿ.ಕೆ ಶಿವಕುಮಾರ್ ಜೊತೆ ಮಾತನಾಡಿಲ್ಲ ಎಂದು ಜಿಟಿಡಿ ಹೇಳಿದ್ದಾರೆ.