DK Shivakumar: ಮುಂದೆ ಡಿಕೆ ಸರ್ಕಾರ ತರಬೇಕು; ಮತ್ತೆ ಸಿಎಂ ಆಸೆ ಬಿಚ್ಚಿಟ್ಟ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್!

0
Spread the love

ಬೆಂಗಳೂರು:- ಡಿಕೆ-ಡಿಕೆ ಅಂತ ಕೂಗೋದಲ್ಲ, ಮುಂದೆಯೂ ನನಗೆ ಅವಕಾಶ ಕೊಡಿ ಎಂದು ಹೇಳುವ ಮೂಲಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು, ಮತ್ತೆ ಸಿಎಂ ಆಸೆ ಬಿಚ್ಚಿಟ್ಟಿದ್ದಾರೆ. ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಡಿಕೆ ಶಿವಕುಮಾರ್ ಭಾಷಣ ಮಾಡಲು ಬಂದ ಕೂಡಲೇ ವಿದ್ಯುತ್ ಇಲಾಖೆ ಸಿಬ್ಬಂದಿಗಳು, ನೌಕರರು ಡಿಕೆ ಡಿಕೆ ಅಂತ ಘೋಷಣೆ ಕೂಗಿದರು. ಈ ವೇಳೆ ಮಾತಾನಾಡಿದ ಡಿಕೆ ಶಿವಕುಮಾರ್, ಈಗ ಡಿಕೆ ಡಿಕೆ ಅನ್ನೋದು ಅಲ್ಲ. ಎಲೆಕ್ಷನ್ ‌ನಲ್ಲಿ ಇನ್ನೊಂದು ಸಾರಿ ಡಿಕೆ ಶಿವಕುಮಾರ್ ತಂದು ಕೂರಿಸಿದ ಮೇಲೆ ಈ ಘೋಷಣೆ ಕೂಗಿ ಎಂದರು.

Advertisement

ತಾವು ಇಂಧನ ಇಲಾಖೆ ಸಚಿವನಾಗಿ ಇದ್ದಾಗ ಮಾಡಿದ ಸಾಧನೆ ಹೇಳಿದ್ರು. ನೀವು ಮನಸ್ಸು ಮಾಡಿದ್ರೆ ಡಿಕೆ ಶಿವಕುಮಾರ್‌ನನ್ನು ಮೇಲಕ್ಕೆ ಎತ್ತಬಹುದು. ಕೆಳಗೆ ಇಳಿಸಬಹುದು. ಅಷ್ಟು ಶಕ್ತಿ ನಿಮಗೆ ಇದೆ. ನಾವು ನಿಮಗೆ ಎಲ್ಲಾ ಮಾಡಿದ್ದೇವೆ. ನಿಮಗೆ ನಮ್ಮ ಮೇಲೆ ಉಪಕಾರ ಸ್ಮರಣೆ ಇರಬೇಕು. ಬರೀ ಡಿಕೆ ಡಿಕೆ ಅನ್ನೋದಲ್ಲ. ಈ ಸರ್ಕಾರವನ್ನು ತಂದು ಕೂರಿಸಬೇಕು ಎನ್ನುವ ಮೂಲಕ ಸಿಎಂ ಸ್ಥಾನಕ್ಕೆ ಆಶೀರ್ವಾದ ಮಾಡಬೇಕೆಂದು ಪರೋಕ್ಷವಾಗಿ ಹೇಳಿದರು.

ಸಿಎಂ ಆಗಬೇಕೆಂಬ ಕನಸು ಕಂಡಿದ್ದ ಡಿಕೆಶಿ:

2023 ರಲ್ಲಿ ಕಾಂಗ್ರೆಸ್ ಬಹುಮತದಿಂದ ಅಧಿಕಾರಕ್ಕೆ ಬಂದಾಗಲೇ ತಮಗೆ ಸಿಎಂ ಸ್ಥಾನ ನೀಡಬೇಕೆಂದು ಹೈಕಮಾಂಡ್ ಎದುರು ಡಿಸಿಎಂ ಡಿಕೆ ಶಿವಕುಮಾರ್ ಅವರು ಬಿಗಿಪಟ್ಟು ಹಿಡಿದಿದ್ದರು. ಇದರಿಂದ ಅಧಿಕಾರಕ್ಕೆ ಬಂದರು ಕೂಡ ಸಿಎಂ ಆಯ್ಕೆ ಕಾಂಗ್ರೆಸ್‌ನಲ್ಲಿ ಕಗ್ಗಂಟ್ಟಾಗುವಂತೆ ಆಗಿತ್ತು. ಅಂತಿಮವಾಗಿ ಉಪಮುಖ್ಯಮಂತ್ರಿ ಸ್ಥಾನಮಾನ ಹಾಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನ ಮುಂದುವರೆಸುವ ಭರವಸೆ ಸಿಕ್ಕ ಬಳಿಕ ಡಿಕೆ ಶಿವಕುಮಾರ್ ಅವರು ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಲು ಒಪ್ಪಿಕೊಂಡಿದ್ದರು.

ಅಷ್ಟೇ ಅಲ್ಲದೇ ಇತ್ತೀಚೆಗೆ, ತಮಗೆ ಸಿಎಂ ಸ್ಥಾನ ಸಿಗುವ ದಿನಗಳು ಬರಲಿವೆ ಎಂದು ಹೇಳಿಕೆ ನೀಡಿದ್ದರು. ಇದೀಗ ಸಿಎಂ ಸಿದ್ದರಾಮಯ್ಯ ಮುಂದೆಯೇ ಮುಂದಿನ ಬಾರಿ ಡಿಕೆ ಶಿವಕುಮಾರ್ ನೇತೃತ್ವದ ಸರ್ಕಾರ ಬರಲು ಸಹಕಾರ ನೀಡಬೇಕು ಎಂದು ಕರೆ ನೀಡುವ ಮೂಲಕ ಮತ್ತೊಮ್ಮೆ ತಮ್ಮ ಮುಖ್ಯಮಂತ್ರಿ ಕನಸನ್ನು ಬಿಚ್ಚಿಟ್ಟಿದ್ದಾರೆ.


Spread the love

LEAVE A REPLY

Please enter your comment!
Please enter your name here