ಹುಬ್ಬಳ್ಳಿ: ಹೈಕಮಾಂಡ್ ನೇತೃತ್ವದಲ್ಲಿ ಡಿಕೆಶಿ ಹಾಗೂ ಸಿದ್ದರಾಮಯ್ಯ ನಡುವೆ ಒಪ್ಪಂದ ಆಗಿದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ ಒಳ ಜಗಳ ಜೋರಾಗಿದೆ. ಯಾವಾಗ ಸ್ಪೋಟ ಆಗುತ್ತೋ ಗೊತ್ತಿಲ್ಲ. ಮುಖ್ಯಮಂತ್ರಿ ಆಯ್ಕೆ ಸಮಯದಲ್ಲಿ ಪವರ್ ಶೇರಿಂಗ್ ಮಾತುಕತೆ ಆಗಿತ್ತು.
ಹೀಗಾಗಿ ಸಿಎಂ ಸ್ಥಾನ ಹಂಚಿಕೆ ತಡ ಆಯ್ತು. ಹೈಕಮಾಂಡ್ ನೇತೃತ್ವದಲ್ಲಿ ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ನಡುವೆ ಒಪ್ಪಂದ ಆಗಿದೆ. ಅದರ ಬಗ್ಗೆ ಬಹಿರಂಗವಾಗಿ ಹೇಳಲು ಯಾರಿಗೂ ಧೈರ್ಯ ಇಲ್ಲ ಎಂದರು. ಸಿದ್ದರಾಮಯ್ಯ ಅಧಿಕಾರ ಬಿಟ್ಟು ಇಳಿಯಲು ತಯಾರಿಲ್ಲ. ಆದರೆ ಡಿ.ಕೆ.ಶಿವಕುಮಾರ್ ಒಪ್ಪಂದದಂತೆ ಅಧಿಕಾರ ಕೊಡಿ ಅಂತ ಕೇಳ್ತಿದ್ದಾರೆ.
ಕೆಪಿಸಿಸಿ ಅಧ್ಯಕ್ಷರಿದ್ದಾಗ ಅವರಿಬ್ಬರ ನೇತೃತ್ವದಲ್ಲಿ ಅಧಿಕಾರಕ್ಕೆ ಬಂದಿದೆ. ಸಿದ್ದರಾಮಯ್ಯ, ಡಿಕೆಶಿ ಇಬ್ಬರು ನೇರವಾಗಿ ಮಾತನಾಡಲು ತಯಾರಿಲ್ಲ. ಹೈಕಮಾಂಡ್ ಗೆ ಬಿಟ್ಟ ವಿಚಾರ ಅಂತ ಸಿದ್ದರಾಮಯ್ಯ ಹೇಳ್ತಾರೆ. ಹಾಗಾದ್ರೆ ಇಬ್ಬರ ನಡುವೆ ಏನೋ ನಡೆದಿದೆ ಅಂದಹಾಗಾಯ್ತು ಎಂದು ಲೇವಡಿ ಮಾಡಿದರು.