HomeMUNICIPALITY NEWSಬರ ನಿರ್ವಹಣೆಯಲ್ಲಿ ನಿಷ್ಕಾಳಜಿ ಬೇಡ : ಬಿ. ಜಗದೇವ

ಬರ ನಿರ್ವಹಣೆಯಲ್ಲಿ ನಿಷ್ಕಾಳಜಿ ಬೇಡ : ಬಿ. ಜಗದೇವ

For Dai;y Updates Join Our whatsapp Group

ವಿಜಯಸಾಕ್ಷಿ ಸುದಿ,ಲಕ್ಷ್ಮೇಶ್ವರ : ಈ ಬಾರಿ ತಾಲೂಕು ವ್ಯಾಪ್ತಿಯಲ್ಲಿ ಬರಗಾಲವಿದ್ದು, ಮಳೆ ಕೊರತೆ ಉಂಟಾಗಿರುವುದರಿಂದ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕರು ಮತ್ತು ತಾಲೂಕು ಪಂಚಾಯಿತಿ ಆಡಳಿತಾಧಿಕಾರಿ ಬಿ. ಜಗದೇವ ಹೇಳಿದರು.

sabhe

ಅವರು ತಾಲೂಕು ಪಂಚಾಯಿತಿ ಸಾಮರ್ಥ್ಯ ಸೌಧದಲ್ಲಿ ಗುರುವಾರ ನಡೆದ ಬರ ನಿರ್ವಹಣೆ ಸಭೆಯಲ್ಲಿ ಮಾತನಾಡಿ, ಬರ ನಿರ್ವಹಣೆ ಬಗ್ಗೆ ನಿಷ್ಕಾಳಜಿ ವಹಿಸದೆ ಎಲ್ಲ ಇಲಾಖೆಗಳ ಅಧಿಕಾರಿಗಳು ತಮಗೆ ವಹಿಸಿದ ಜವಾಬ್ದಾರಿಯನ್ನು ನಿಗದಿತ ಸಮಯದಲ್ಲಿ ನಿರ್ವಹಿಸಬೇಕೆಂದು ಸೂಚನೆ ನೀಡಿದರು. ಮೇ ಮತ್ತು ಜೂನ್ ತಿಂಗಳಲ್ಲಿ ನೀರಿನ ಸಮಸ್ಯೆ ಎದುರಾಗದಂತೆ ಪೂರ್ವ ನಿಯೋಜಿತ ರೂಪುರೇಷೆಯನ್ನು ತಯಾರಿಸುವಂತೆ ಸೂಚನೆ ನೀಡಲಾಗಿದೆ. ಖಾಸಗಿ ಬೋರ್‌ವೆಲ್ ಮೂಲಕ ನೀರು ಒದಗಿಸಲು ಬೋರ್‌ವೆಲ್ ಮಾಲೀಕರೊಂದಿಗೆ ಒಪ್ಪಂದ ಮಾಡಿಕೊಂಡು, ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ನೋಡಿಕೊಳ್ಳಬೇಕು. ಶುದ್ಧ ಕುಡಿಯುವ ನೀರಿನ ಘಟಕ ಚಾಲನೆಯಲ್ಲಿರುವಂತೆ ನೋಡಿಕೊಳ್ಳಲು ಸೂಚಿಸಿದರು.

ಮೇ 7ರಂದು ನಡೆಯುವ ಲೋಕಸಭಾ ಚುನಾವಣೆಗೆ ಮತದಾನ ದಿನಾಂಕ ನಿಗದಿಪಡಿಸಲಾಗಿದೆ. ಆದ್ದರಿಂದ ಮತಗಟ್ಟೆಗಳಲ್ಲಿ ನೀರಿನ ಸಂಪರ್ಕ, ವಿದ್ಯುತ್, ಶೌಚಾಲಯ ಸೇರಿದಂತೆ ಅಗತ್ಯ ಮೂಲ ಸೌಕರ್ಯ ಒದಗಿಸುವಂತೆ ತಿಳಿಸಿದರು. ತಹಸೀಲ್ದಾರ್ ವಾಸುದೇವ ಸ್ವಾಮಿ ಮಾತನಾಡಿ, ಮಳೆ, ಗಾಳಿ, ಗುಡುಗು, ಸಿಡಿಲು ಹಾಗೂ ಪ್ರಕೃತಿ ವಿಕೋಪದಿಂದ ಉಂಟಾಗುವ ಪ್ರಾಣಹಾನಿ ತಪ್ಪಿಸಲು ಮುನ್ನೆಚ್ಚರಿಕೆಯಾಗಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವಂತೆ ತಿಳಿಸಿದರು. ಮನೆಗಳಲ್ಲಿ ಮತದಾನ ಪ್ರಕ್ರಿಯೆ ಶುಕ್ರವಾರದಿಂದ ಆರಂಭವಾಗಲಿದೆ. ಸಂಬಂಧಿಸಿದ ಸಿಬ್ಬಂದಿಗೆ ಅಗತ್ಯ ಸಹಕಾರ ನೀಡುವಂತೆ ಸೂಚಿಸಿದರು.

ಪುರಸಭೆ ಮುಖ್ಯಾದಿಕಾರಿ ಮಹೇಶ ಹಡಪದ, ತಾಲೂಕು ವ್ಯಾಪ್ತಿಯ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಮತ್ತು ಗ್ರಾಮ ಆಡಳಿತಾಧಿಕಾರಿಗಳು, ತೋಟಗಾರಿಕೆ, ಪಶುಪಾಲನೆ, ಅರಣ್ಯ ಮತ್ತು ಕುಡಿಯುವ ನೀರು ಪೂರೈಕೆ ತಾಲೂಕು ಮಟ್ಟದ ಅಧಿಕಾರಿಗಳು, ತಾಲೂಕು ಪಂಚಾಯಿತಿ ಸಿಬ್ಬಂದಿಗಳು ಹಾಜರಿದ್ದರು.

ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣಪ್ಪ ಧರ್ಮರ ಮಾತನಾಡಿ, ಮುಂದಿನ ಕೆಲ ದಿನಗಳಲ್ಲಿ ಕುಡಿಯುವ ನೀರಿನ ತೊಂದರೆ ಉಂಟಾಗುವ ಸಾಧ್ಯತೆ ಹೆಚ್ಚಿದೆ. ಎಲ್ಲ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು. ಖಾಸಗಿ ಬೊರ್‌ವೆಲ್ ಮಾಲೀಕರೊಂದಿಗೆ ಸಭೆ ಮಾಡಿ ಒಪ್ಪಂದ ಪತ್ರಗಳನ್ನು ಮಾಡಿಕೊಳ್ಳಬೇಕು. ಮುಂದಿನ ಸಭೆಗೆ ಆಗಮಿಸುವಾಗ ಅದರ ಪ್ರತಿಗಳನ್ನು ತರಬೇಕು ಎಂದು ಸೂಚಿಸಿದರು.

 

LEAVE A REPLY

Please enter your comment!
Please enter your name here

E-Paper

E-paper

Must Read

spot_img