ಮುಡಾ ಹಗರಣ: ಲೋಕಾಯುಕ್ತ ವಿಚಾರಣೆ ಬಳಿಕ ಸಿಎಂ ಸಿದ್ದರಾಮಯ್ಯ ಮೊದಲ ಪ್ರತಿಕ್ರಿಯೆ ಏನೂ ಗೊತ್ತಾ..?

0
Spread the love

ಮೈಸೂರು: ಮುಡಾ ಸೈಟ್ ಹಂಚಿಕೆ ಹಗರಣ ಪ್ರಕರಣದಲ್ಲಿ ಎ1 ಆಗಿರುವ ಸಿಎಂ ಸಿದ್ದರಾಮಯ್ಯ ಇಂದು ಲೋಕಾಯುಕ್ತ ಪೊಲೀಸರ ವಿಚಾರಣೆ ಎದುರಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ್ದಾರೆ. ಕಾನೂನು ಪ್ರಕಾರವೇ ನಿವೇಶನ ಪಡೆದಿದ್ದೇನೆ. ಬಿಜೆಪಿ, ಜೆಡಿಎಸ್​ ನನ್ನ ವಿರುದ್ಧ ಸುಳ್ಳು ಆರೋಪ ಮಾಡಿವೆ. ಲೋಕಾಯುಕ್ತ ಅಧಿಕಾರಿಗಳು ಕೇಳಿದ ಎಲ್ಲಾ ಪ್ರಶ್ನೆಗೆ ಉತ್ತರಿಸಿದ್ದೇನೆ. ಇನ್ನು,

Advertisement

ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ಬಿಜೆಪಿಯವರು ಆಗ್ರಹಿಸುತ್ತಿರುವ ವಿಚಾರವಾಗಿ ಮಾತನಾಡಿದ ಅವರು, ಬಿಜೆಪಿಯವರು ಯಾವುದಾದರೂ ಕೇಸ್​ ಸಿಬಿಐಗೆ ಕೊಟ್ಟಿದ್ದಾರಾ? ಎಂದು ಪ್ರಶ್ನಿಸಿದರು. ಲೋಕಾಯುಕ್ತ ಸ್ವತಂತ್ರವಾಗಿ ತನಿಖೆ ಮಾಡುತ್ತಿರುವ ಸಂಸ್ಥೆ. ಲೋಕಾಯುಕ್ತ ಅಧಿಕಾರಿಗಳು ಕೇಳಿದ ಎಲ್ಲ ಪ್ರಶ್ನೆಗೆ ಉತ್ತರಿಸಿದ್ದೇನೆ. ಎಲ್ಲವೂ ಕೂಡ ಕಾನೂನು ಪ್ರಕಾರವೇ ನಡೆದಿದೆ. ಬಿಜೆಪಿ, ಜೆಡಿಎಸ್​ನವರು ಮಾಡಿದ್ದ ಸುಳ್ಳು ಆರೋಪಗಳಿಗೆ ಕೋರ್ಟ್​ನಲ್ಲಿ ಉತ್ತರ ನೀಡುತ್ತೇನೆ ಎಂದು ಹೇಳಿದರು.


Spread the love

LEAVE A REPLY

Please enter your comment!
Please enter your name here