ಬೆಂಗಳೂರು: ನಾಲ್ವರು ಮಹಿಳೆಯರು ಮತ್ತು ಇಬ್ಬರು ಪುರುಷರನ್ನು ಒಳಗೊಂಡ ಮಾವೋವಾದಿ ಹೋರಾಟಗಾರರು ಸಿಎಂ ಸಿದ್ದರಾಮಯ್ಯ ಮುಂದೆ ಶರಣಾಗತರಾಗಲಿದ್ದಾರೆ. ಹೀಗಾದಲ್ಲಿ ಕರ್ನಾಟಕದ ಇತಿಹಾಸದಲ್ಲಿ ಇದೇ ಮೊದಲ ಬಾರಿ ಇಂತಹದೊಂದು ಘಟನೆಗೆ ಸಿಎಂ ಕಚೇರಿ ಸಾಕ್ಷಿ ಆಗಲಿದೆ.
ಮುಂಡುಗಾರು ಲತಾ (ಮುಂಡಗಾರು ಶೃಂಗೇರಿ), ವನಜಾಕ್ಷಿ (ಬಾಳೆಹೊಳೆ ಕಳಸ), ಸುಂದರಿ (ಕುಂತಲೂರು ದಕ್ಷಿಣ ಕನ್ನಡ), ಮಾರಪ್ಪ ಅರೋಳಿ (ರಾಯಚೂರು) ,ವಸಂತ ಟಿ (ತಮಿಳುನಾಡು), ಎನ್. ಜೀಶಾ (ಕೇರಳ) ಶರಣಾಗುವ ನಕ್ಸಲರು ಆಗಿದ್ದು,
ಇನ್ನೂ ಶರಣಾಗತಿಯಾಗುತ್ತಿರುವ ನಕ್ಸಲರಿಗೆ ರಾಜ್ಯ ಸರ್ಕಾರ, ಮೂರು ಕೆಟಗರಿಯಲ್ಲಿ ಪ್ಯಾಕೇಜ್ ಘೋಷಿಸಿದೆ. ಈ ನಕ್ಸಲರು ಸುಮ್ಮನೇ ಶರಣಾಗುತ್ತಿಲ್ಲ. ಸಾಕಷ್ಟು ಬೇಡಿಕೆಗಳನ್ನಿಟ್ಟುಕೊಂಡೇ ಶರಣಾಗುತ್ತಿದ್ದಾರೆ. ಶರಣಾಗತಿಯಾಗುತ್ತಿರುವ ನಕ್ಸಲರಿಗೆ ಸರ್ಕಾರ ಪ್ಯಾಕೇಜ್ ನೀಡುತ್ತಿದೆ. ಇದರಲ್ಲಿ ಮೂರು ಕೆಟಗರಿ ಇದೆ.
ಕೆಟಗರಿ ಎ: ನಮ್ಮ ರಾಜ್ಯದವರೇ ಆಗಿದ್ದು, ಆಕ್ಟಿವ್ ಆಗಿರುವಾಗ ಕೇಸ್ ಇದ್ದು ಶರಣಾಗತಿಯಾಗುತ್ತಿದ್ದರೆ 7.50 ಲಕ್ಷ ರೂ. ಹಣ ಸಿಗುತ್ತದೆ.
ಕೆಟಗರಿ ಬಿ: ನಕ್ಸಲರು ಹೊರರಾಜ್ಯದವನಾಗಿದ್ದು, ಶಸ್ತ್ರಸಜ್ಜಿತ ನಕ್ಸಲ್ ಗುಂಪಿನ ಸದಸ್ಯನಾಗಿದ್ದು, ಒಂದಕ್ಕಿಂತ ಹೆಚ್ಚು ಸದಸ್ಯರಾಗಿದ್ದರೆ 4 ಲಕ್ಷ ರೂ. ಪ್ಯಾಕೇಜ್ ಸಿಗುತ್ತದೆ.
ಕೆಟಗರಿ ಸಿ: ನಕ್ಸಲ್ ಗುಂಪಿನೊಂದಿಗೆ ಸಂಪರ್ಕ ಹೊಂದಿ, ಪ್ರಕರಣಗಳು ಇದ್ದರೆ 2 ಲಕ್ಷ ರೂ. ಹಣವನ್ನು ಸರ್ಕಾರ ನೀಡಲಿದೆ.