HomeBengaluru Newsಬಾಂಗ್ಲಾದೇಶಿ ದಂಪತಿ ಮೇಲೆ ಹಲ್ಲೆ ಆರೋಪ! ಬೆಳ್ಳಂದೂರಿನ ವೈದ್ಯ ಬಂಧನ

ಬಾಂಗ್ಲಾದೇಶಿ ದಂಪತಿ ಮೇಲೆ ಹಲ್ಲೆ ಆರೋಪ! ಬೆಳ್ಳಂದೂರಿನ ವೈದ್ಯ ಬಂಧನ

For Dai;y Updates Join Our whatsapp Group

ಬೆಂಗಳೂರು: ಬಾಂಗ್ಲಾದೇಶಿ ಮೂಲದ ದಂಪತಿ ಮೇಲೆ ಹಲ್ಲೆ ನಡೆಸಿದ ಆರೋಪದಡಿ ಬೆಂಗಳೂರಿನ ಬೆಳ್ಳಂದೂರಿನ ಸ್ಥಳೀಯ ವೈದ್ಯ ಡಾ. ನಾಗೇಂದ್ರ ಅವರನ್ನು ಪೊಲೀಸರು ಬಂಧಿಸಿದ್ದಾರೆ. ದಂಪತಿಯ ಪೌರತ್ವ ಪ್ರಶ್ನಿಸಿ ಜಗಳ ಆರಂಭಿಸಿ ಹಲ್ಲೆ ನಡೆಸಿದ ಆರೋಪ ಕೇಳಿಬಂದಿದ್ದು, ಪ್ರಕರಣ ದಾಖಲಿಸಿಕೊಂಡ ಬೆಳ್ಳಂದೂರು ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಳಿಕ ಅವರಿಗೆ ಜಾಮೀನು ಮಂಜೂರಾಗಿದೆ.

ಬೆಳ್ಳಂದೂರು ವ್ಯಾಪ್ತಿಯ ಸಾಯಿ ಕ್ಲಿನಿಕ್‌ನ ವೈದ್ಯರಾಗಿರುವ ಡಾ. ನಾಗೇಂದ್ರ ವಿರುದ್ಧ ನಸ್ರೀನಾ ಬಿಲಾಲ್ (23) ದೂರು ದಾಖಲಿಸಿದ್ದಾರೆ. ವೈಟ್‌ಫೀಲ್ಡ್ ಸಮೀಪದ ಬೆಟ್ಟದಾಸಪುರದಲ್ಲಿ ವಾಸಿಸುತ್ತಿರುವ ನಸ್ರೀನಾ ಬಿಲಾಲ್ ಹಾಗೂ ಅವರ ಪತಿ ಮಹಮ್ಮದ್ ಬಿಲಾಲ್ ಬಾಂಗ್ಲಾದೇಶ ಮೂಲದವರಾಗಿದ್ದಾರೆ.

ದೂರಿನ ಪ್ರಕಾರ, ದಂಪತಿಯ ಪೌರತ್ವವನ್ನು ಪ್ರಶ್ನಿಸಿ ವೈದ್ಯ ನಾಗೇಂದ್ರ ವಾಗ್ವಾದ ಆರಂಭಿಸಿದ್ದು, ಮಾತಿನ ಚಕಮಕಿಯ ವೇಳೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡ ಬೆಳ್ಳಂದೂರು ಪೊಲೀಸರು ಡಾ. ನಾಗೇಂದ್ರ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ವಿಚಾರಣೆ ಬಳಿಕ ನ್ಯಾಯಾಲಯವು ಅವರಿಗೆ ಜಾಮೀನು ಮಂಜೂರು ಮಾಡಿದೆ.

ಪ್ರಕರಣದ ಕುರಿತು ಪ್ರತಿಕ್ರಿಯಿಸಿರುವ ತನಿಖಾಧಿಕಾರಿಗಳು, ಪ್ರದೇಶದಲ್ಲಿ ಅಕ್ರಮ ವಲಸಿಗರ ಬಗ್ಗೆ ಉಂಟಾದ ಭಾವೋದ್ವೇಗದಿಂದ ವೈದ್ಯರು ಈ ರೀತಿ ವರ್ತಿಸಿರುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ. ಆದರೆ ಯಾರ ಮೇಲಾದರೂ ಹಲ್ಲೆ ನಡೆಸುವುದು ಕಾನೂನುಬಾಹಿರವಾಗಿದ್ದು, ಅನುಮಾನ ಇದ್ದರೆ ಪೊಲೀಸರಿಗೆ ಮಾಹಿತಿ ನೀಡಬೇಕಿತ್ತು, ಕಾನೂನನ್ನು ಕೈಗೆ ತೆಗೆದುಕೊಳ್ಳಬಾರದಿತ್ತು ಎಂದು ಸ್ಪಷ್ಟಪಡಿಸಿದ್ದಾರೆ.

ಸದ್ಯ ದೂರು ನೀಡಿರುವ ದಂಪತಿಯ ದಾಖಲೆಗಳು ಹಾಗೂ ಅವರ ಹಿನ್ನೆಲೆಯ ಕುರಿತು ಪೊಲೀಸರು ಹೆಚ್ಚಿನ ಮಾಹಿತಿ ಸಂಗ್ರಹಿಸುತ್ತಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img