HomeBengaluru Newsಡಾಕ್ಟರ್ ಗಳ ಬರವಣಿಗೆ ಅರ್ಥ ಆಗ್ತಿಲ್ಲ, ಕನ್ನಡದಲ್ಲೇ ಔಷಧ ಚೀಟಿ ಬರೆಯಲು ಆದೇಶಿಸಿ: ದಿನೇಶ್ ಗುಂಡೂರಾವ್...

ಡಾಕ್ಟರ್ ಗಳ ಬರವಣಿಗೆ ಅರ್ಥ ಆಗ್ತಿಲ್ಲ, ಕನ್ನಡದಲ್ಲೇ ಔಷಧ ಚೀಟಿ ಬರೆಯಲು ಆದೇಶಿಸಿ: ದಿನೇಶ್ ಗುಂಡೂರಾವ್ ಗೆ ಪತ್ರ!

For Dai;y Updates Join Our whatsapp Group

Spread the love

ಬೆಂಗಳೂರು:- ಡಾಕ್ಟರ್ ಗಳ ಬರವಣಿಗೆ ಅರ್ಥ ಆಗ್ತಿಲ್ಲ, ಕನ್ನಡದಲ್ಲೇ ಔಷಧ ಚೀಟಿ ಬರೆಯಲು ಆದೇಶಿಸಿ ಎಂದು ದಿನೇಶ್ ಗುಂಡೂರಾವ್ ಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ಪತ್ರ ಬರೆದಿದ್ದಾರೆ.

ಭಾಷೆಯ ಬೆಳವಣಿಗೆಯ ದೃಷ್ಠಿಯಿಂದ ಸರ್ಕಾರಿ ವೈದ್ಯರೆಲ್ಲರೂ ಕನ್ನಡದಲ್ಲಿಯೇ ಔಷಧಿ ಚೀಟಿ ಬರೆಯಬೇಕೆಂದು ಕಡ್ಡಾಯ ಆದೇಶ ಮಾಡುವಂತೆ ಮನವಿ ಮಾಡಿದ್ದಾರೆ.

ಅಧುನಿಕ ಕಾಲಘಟ್ಟದಲ್ಲಿ ಭಾಷಾಭಿಮಾನ ಎನ್ನುವುದು ನೇಪಥ್ಯಕ್ಕೆ ಸರಿಯುತ್ತಿರುವುದು ಸಾಮಾಜಿಕ ಸ್ವಾಸ್ಥ್ಯದ ದೃಷ್ಠಿಯಿಂದ ಆರೋಗ್ಯಕರ ಬೆಳವಣಿಗೆ ಆಗಿರುವುದಿಲ್ಲ. ಇಂತಹ ಸಂದರ್ಭಗಳಲ್ಲಿ ಸಾಂಸ್ಥಿಕ ಪ್ರಯತ್ನಗಳು ಮಾತ್ರ ನಿರೀಕ್ಷಿತ ಪರಿಣಾಮವನ್ನು ದೊರಕಿಸಿ ಕೊಡುವುದಲ್ಲದೇ ರಾಜ್ಯ ಭಾಷೆಯ ಉಳಿವಿಗೆ ಮಹತ್ವದ ಕೊಡುಗೆಯನ್ನು ನೀಡುತ್ತದೆ.

ಇತ್ತೀಚೆಗೆ ರಾಯಚೂರಿಗೆ ಕಾರ್ಯನಿಮಿತ್ತ ತೆರಳಿದ ಸಂದರ್ಭದಲ್ಲಿ ಜಿಲ್ಲೆಯ ವೈದ್ಯರು ತಮ್ಮ ಔಷಧಿ ಚೀಟಿಗಳನ್ನು ಕನ್ನಡದಲ್ಲಿ ಬರೆಯಬೇಕೆಂದು ಪ್ರೇರೇಪಿಸಿ ಅಲ್ಲಿನ ಜಿಲ್ಲಾಧಿಕಾರಿಗೆ ಈ ಕುರಿತಂತೆ ಅಗತ್ಯ ಸೂಚನೆಗಳನ್ನು ಹೊರಡಿಸಲು ನಿರ್ದೇಶನವನ್ನು ನೀಡಿದ್ದೆ.

ಮಾಧ್ಯಮಗಳಲ್ಲಿ ಬಂದ ವರದಿಗಳನ್ನು ಗಮನಿಸಿ ನೂರಾರು ವೈದ್ಯರು ಸ್ವಯಂಪ್ರೇರಿತರಾಗಿ ತಾವು ಕನ್ನಡ ಭಾಷೆಯನ್ನು ಉಳಿಸಲು ಔಷಧಿ ಚೀಟಿಗಳನ್ನು ಕನ್ನಡದಲ್ಲೇ ಬರೆಯುವ ಕೆಲಸವನ್ನು ಆರಂಭಿಸುತ್ತೇವೆ ಎಂದು ತಮ್ಮ ಭಾಷಾಭಿಮಾನವನ್ನು ನಮ್ಮಲ್ಲಿ ವ್ಯಕ್ತಪಡಿಸಿದ್ದಾರೆ.

ಹಲವಾರು ಜನ ತಾವು ಕನ್ನಡದಲ್ಲಿ ಬರೆದ ಔಷಧಿ ಚೀಟಿಗಳನ್ನು ನನ್ನಲ್ಲಿ ಹಂಚಿಕೊಂಡಿದ್ದಾರೆ. ಇದು ಪ್ರಾಧಿಕಾರದ ಅಧ್ಯಕ್ಷನಾಗಿ ನನಗೆ ರೋಮಾಂಚನಗೊಳಿಸುವ ಸಂಗತಿಯಾಗಿದೆ. ಈ ಪರಿಣಾಕಾರಿಯಾದ ಮಾನಸಿಕತೆಯ ಮೂಲಕ ಕನ್ನಡ ಭಾಷೆಗೆ ಒಂದು ಮಹತ್ವದ ಹಾದಿ ಇದೀಗ ತೆರೆದುಕೊಂಡಿದೆ ಎಂಬ ಅಭಿಪ್ರಾಯ ನನ್ನದಾಗಿದ್ದು, ಇದು ಸರ್ವವ್ಯಾಪಿಯಾಗಬೇಕಾದ ಅನಿವಾರ್ಯತೆ ಇರುತ್ತದೆ.

ರಾಜ್ಯದ ಮೂಲೆಗಳಲ್ಲಿರುವ ಆರೋಗ್ಯ ಕೇಂದ್ರಗಳು ಸೇರಿದಂತೆ ತಾಲೂಕು, ಜಿಲ್ಲಾಸ್ಪತ್ರೆಗಳಲ್ಲಿ ಕಾರ್ಯನಿರ್ವಹಿಸುವ ಸರ್ಕಾರಿ ವೈದ್ಯರುಗಳು ತಾವು ಬರೆಯುವ ಔಷಧಿ ಚೀಟಿಗಳಲ್ಲಿ ಕನ್ನಡ ಬಳಕೆಗೆ ಪ್ರಾಧಾನ್ಯತೆಯನ್ನು ನೀಡಿದಲ್ಲಿ ಕನ್ನಡ ಅಸ್ಮಿತೆಯನ್ನು ಉಳಿಸುವ ಮಹತ್ವದ ಹೆಜ್ಜೆಯಾಗುತ್ತದೆ. ಇದು ಕಡ್ಡಾಯವಾಗದೆ ಹೋದಲ್ಲಿ ಇದರ ಅನುಷ್ಠಾನವೂ ನಿರೀಕ್ಷಿತ ಪ್ರಗತಿಯನ್ನು ಹೊಂದುವುದು ಸಾಧ್ಯವಿರುವುದಿಲ್ಲ.

ಇಲ್ಲಿ ರಾಜ್ಯ ಸರ್ಕಾರ ದೃಢ ನಿಲುವು ತನ್ನದೇ ಪರಿಣಾಮವನ್ನು ಹೊಂದುವ ಕಾರಣ, ತಾವು ಈ ನಿಟ್ಟಿನಲ್ಲಿ ವೈಯಕ್ತಿಕ ಗಮನಹರಿಸಿ ರಾಜ್ಯದ ಎಲ್ಲಾ ಸರ್ಕಾರಿ ಆರೋಗ್ಯ ಕೇಂದ್ರಗಳು ಮತ್ತು ಸರ್ಕಾರಿ ಆಸ್ಪತ್ರೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವೈದ್ಯರುಗಳು ಕಡ್ಡಾಯವಾಗಿ ತಮ್ಮ ಔಷಧಿ ಚೀಟಿಗಳನ್ನು ಕನ್ನಡದಲ್ಲಿ ಬರೆಯಲು ಸರ್ಕಾರದ ಆದೇಶವನ್ನು ಜಾರಿ ಮಾಡಬೇಕಾಗಿ ಈ ಮೂಲಕ ಕೋರುತ್ತೇನೆ ಎಂದು ಹೇಳಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!