ದೊಡ್ಡಬಳ್ಳಾಪುರ: ಹೆಂಡತಿ ವಿಚಾರಕ್ಕೆ ಗಲಾಟೆ ಶುರುವಾಗಿ ಮಾರಕಾಸ್ತ್ರದಿಂದ ಸ್ನೇಹಿತನ ತಲೆ ಮೇಲೆ ಹಲ್ಲೆ ಮಾಡಿದ್ದು, ಪರಿಣಾಮ ವ್ಯಕ್ತಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದ ಹೆಗ್ಗಡಿಹಳ್ಳಿ ಬಳಿ ನಡೆದಿದೆ. ವಿಜಯಕುಮಾರ್( 29) ಮೃತ ದುರ್ದೈವಿಯಾಗಿದ್ದು, ಪೂಜಪ್ಪ ಕೊಲೆ ಮಾಡಿರುವ ಆರೋಪಿಯಾಗಿದ್ದಾನೆ.
ಮಾಲೂರು ಮೂಲದ ವ್ಯಕ್ತಿಗಳಾಗಿದ್ದ ಇವರು, ಜಲಜೀವನ್ ಮಿಷನ್ ಯೋಜನೆಯಲ್ಲಿ ಗಾರೆ ಕೆಲಸ ಮಾಡುತ್ತಿದ್ದರು. ವಿಜಯಕುಮಾರ್ ಹೆಂಡತಿ ವಿಚಾರಕ್ಕೆ ಇಬ್ಬರ ನಡುವೆ ಜಗಳ ಶುರುವಾಗಿದ್ದು, ತಲೆಗೆ ಮಾರಕಾಸ್ತ್ರದಿಂದ ಸ್ನೇಹಿತನ ಮೇಲೆ ಹಲ್ಲೆ ಮಾಡಿದ್ದಾನೆ.
ವಿಜಯ್ ಕುಮಾರ್ ತಲೆಗೆ ತೀವ್ರ ಪೆಟ್ಟು ಬಿದ್ದಿದ್ದು, ಪ್ರಾಥಮಿಕ ಚಿಕಿತ್ಸೆಗಾಗಿ ಚಿಕ್ಕಬಳ್ಳಾಪುರ ಸರಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ರವಾನಿಸುವ ವೇಳೆ ಸಾವನ್ನಪ್ಪಿದ್ದು, ಆರೋಪಿಯನ್ನು ವಶಕ್ಕೆ ಪಡೆದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.