ದೊಡ್ಡಬಳ್ಳಾಪುರ: ಹಿಟ್ ಅಂಡ್ ರನ್ ಗೆ ಇಬ್ಬರು ಯುವಕರು ಬಲಿಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲ್ಲೂಕಿನ ರಾಮಯ್ಯನಪಾಳ್ಯ ಬಳಿ ನಡೆದಿದೆ.
ತೂಬಗೆರೆ ನಿವಾಸಿ ನಂದನ್ ಕುಮಾರ್ (22ವರ್ಷ), ದೊಡ್ಡತಿಮ್ಮನಹಳ್ಳಿ ಮೂಲದ ರವಿಕುಮಾರ್ (24) ಮೃತ ದುರ್ದೈವಿಗಳಾಗಿದ್ದು,
ದೊಡ್ಡಬಳ್ಳಾಪುರ ನಗರದ ಎಲ್ ಅಂಡ್ ಟಿ ಕಂಪನಿಗೆ ಕೆಲಸಕ್ಕೆಂದು ಬರುವ ವೇಳೆ ದುರ್ಘಟನೆ ನಡೆದಿದೆ. ಅಪಘಾತದಲ್ಲಿ ತೀರ್ವ ರಕ್ತಸ್ರಾವ ಆದ ಕಾರಣ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದು, ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರೀಶಿಲನೆ ನಡೆಸಿದ್ದಾರೆ.



