ಸರ್ವೇ ವೇಳೆ ಕುರಿ, ಕೋಳಿ, ಚಿನ್ನ, ವಾಚ್ ಬಗ್ಗೆ ಪ್ರಶ್ನೆ ಕೇಳಬೇಡಿ; ಅಧಿಕಾರಿಗಳಿಗೆ ಡಿಸಿಎಂ ಡಿಕೆ ಶಿವಕುಮಾರ್ ಸೂಚನೆ

0
Spread the love

ಬೆಂಗಳೂರು:- ಗಣತಿ ಸರ್ವೇ ವೇಳೆ ಕುರಿ, ಕೋಳಿ, ಚಿನ್ನ, ವಾಚ್ ಬಗ್ಗೆ ಪ್ರಶ್ನೆ ಕೇಳಬೇಡಿ ಎಂದು ಅಧಿಕಾರಿಗಳಿಗೆ ಡಿಸಿಎಂ ಡಿಕೆ ಶಿವಕುಮಾರ್ ಸೂಚನೆ ಕೊಟ್ಟಿದ್ದಾರೆ.

Advertisement

ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ನಿಮಗೆ ಏನು ಉತ್ತರ ಕೊಡಬೇಕೋ ಅದಕ್ಕೆ ಉತ್ತರ ಕೊಡಿ. ಕೊಡಬಾರದು ಅನ್ನಿಸಿದರೆ ಕೊಡಬಾರದು. ಎಷ್ಟು ವಾಚ್, ಎಷ್ಟು ಚಿನ್ನ ಇದೆ, ಎಷ್ಟು ಫ್ರಿಡ್ಜ್ ಇದೆ ಅದೆಲ್ಲ ಕೇಳಬೇಡಿ. ಅದು ಅವರ ಪರ್ಸನಲ್ ಬಿಟ್ಟು ಬಿಡಿ ಎಂದು ಅಧಿಕಾರಿಗಳಿಗೂ ಹೇಳಿದ್ದೇನೆ ಎಂದು ಸ್ಪಷ್ಟಪಡಿಸಿದರು.

ಯಾರು ಬೇಕಾದರೂ ಅಪೇಕ್ಷೆಪಡಲಿ. ಕೋರ್ಟ್ ಹೇಳಿದೆ, ಏನು ಬೇಕೋ ಅದಕ್ಕೆ ಮಾತ್ರ ಉತ್ತರ ನೀಡಿ. ಆದರೆ ಸಮೀಕ್ಷೆ ವಿರೋಧ ಮಾಡೋದರಲ್ಲಿ ಅರ್ಥ ಇಲ್ಲ, ಎಲ್ಲರೂ ಭಾಗಿಯಾಗಬೇಕು. ಇಲಾಖೆಯವರು ಏನು ಮಾಡುತ್ತಾರೆ, ಮಾಡಲಿ. ಎಲ್ಲರೂ ಸಮೀಕ್ಷೆಯಲ್ಲಿ ಭಾಗಿಯಾಗಬೇಕು ಎಂದು ಮನವಿ ಮಾಡಿದರು.


Spread the love

LEAVE A REPLY

Please enter your comment!
Please enter your name here