HomeEntertainmentಅನಗತ್ಯವಾಗಿ ನನ್ನ ಪತ್ನಿ ಹೆಸರನ್ನು ಎಳೆದು ತರಬೇಡಿ: ಮಾಧ್ಯಮಗಳ ವಿರುದ್ಧ ರಾಜ್ ಕುಂದ್ರಾ ಕಿಡಿ

ಅನಗತ್ಯವಾಗಿ ನನ್ನ ಪತ್ನಿ ಹೆಸರನ್ನು ಎಳೆದು ತರಬೇಡಿ: ಮಾಧ್ಯಮಗಳ ವಿರುದ್ಧ ರಾಜ್ ಕುಂದ್ರಾ ಕಿಡಿ

For Dai;y Updates Join Our whatsapp Group

Spread the love

ಅಶ್ಲೀಲ ಚಿತ್ರ ಪ್ರಕರಣಕ್ಕೆ ಸಂಬಂಧಿಸಿದಂತೆ ಖ್ಯಾತ ಬಾಲಿವುಡ್ ನಟಿ ಶಿಲ್ಪಾಶೆಟ್ಟಿ ಪತಿ ಉದ್ಯಮಿ ರಾಜ್ ಕುಂದ್ರಾ ಮಾಧ್ಯಮಗಳ ವಿರುದ್ಧ ಕಿಡಿಕಾರಿದ್ದಾರೆ. ತಮ್ಮ ವಿರುದ್ಧ ಬಂದಿರುವ ಆರೋಪ ಸುಳ್ಳು ಎಂಬುದು ಮುಂದೊಂದು ದಿನ ಸಾಬೀತಾಗುತ್ತದೆ. ಈ ಪ್ರಕರಣದಲ್ಲಿ ಅನಗತ್ಯವಾಗಿ ನನ್ನ ಪತ್ನಿ ಹೆಸರು ಎಳೆದುತರಬೇಡಿ ಎಂದು ಆಗ್ರಹಿಸಿದ್ದಾರೆ.

ರಾಜ್ ಕುಂದ್ರಾ ಮನೆ ಹಾಗೂ ಆಫೀಸ್​​ಗಳ ಮೇಲೆ ನಿನ್ನೆ ಜಾರಿ ನಿರ್ದೇಶನಾಲಯ ದಾಳಿ ಮಾಡಿತ್ತು. ಅಶ್ಲೀಲ ಚಿತ್ರ ತಯಾರಿಕೆ ಪ್ರಕರಣದಲ್ಲಿ ಈ ಹಿಂದೆ ರಾಜ್ ಕುಂದ್ರಾ ಬಂಧನಕ್ಕೀಡಾಗಿದ್ದರು. ಯಾವುದನ್ನು ಸೆನ್ಸೇಷನ್ ಮಾಡಿದರೂ ಸತ್ಯ ಮರೆ ಆಗುವುದಿಲ್ಲ. ಕೊನೆಯಲ್ಲಿ ಸತ್ಯ ಹೊರಬರಲೇಬೇಕು’ ಎಂದಿದ್ದಾರೆ.

ಇದೀಗ ಇದೇ ವಿಚಾರವಾಗಿ ಮಾಧ್ಯಮಗಳ ವಿರುದ್ಧ ರಾಜ್ ಕುಂದ್ರಾ ಆಕ್ರೋಶ ವ್ಯಕ್ತಪಡಿಸಿದ್ದು, ಅನಗತ್ಯವಾಗಿ ನನ್ನ ಪತ್ನಿ ಹೆಸರನ್ನು ಮಾಧ್ಯಮಗಳು ಎಳೆದು ತರುತ್ತಿವೆ. ಶಿಲ್ಪಾ ಶೆಟ್ಟಿ ಅವರ ಹೆಸರನ್ನು ಈ ಪ್ರಕರಣದಿಂದ ದೂರವಿಡಿ. ಈ ಪ್ರಕರಣದಲ್ಲಿ ಶಿಲ್ಪಾ ಶೆಟ್ಟಿ ಅವರ ಹೆಸರನ್ನು ಎಳೆದು ತರಲಾಗುತ್ತಿರುವುದು ತಮಗೆ ಬೇಸರ ತಂದಿದೆ ಎಂದು ಹೇಳಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!