ಸುಮ್ನೆ ನಿಂತು ಕಾಯ್ಬೇಡಿ, ಇನ್ಮುಂದೆ ನಾನು ಮೀಡಿಯಾ ಅಡ್ರೆಸ್‌ ಮಾಡಲ್ಲ: ಪರಮೇಶ್ವರ್‌

0
Spread the love

ಬೆಂಗಳೂರು: ಇಲ್ಲಿ ಬಂದು ಸುಮ್ನೆ ನಿಂತು ಕಾಯ್ಬೇಡಿ. ಇನ್ಮುಂದೆ ನಾನು ಮೀಡಿಯಾ ಅಡ್ರೆಸ್‌ ಮಾಡಲ್ಲ ಎಂದು ಜಿ ಪರಮೇಶ್ವರ್‌ ಹೇಳಿದ್ದಾರೆ.

Advertisement

ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಇನ್ಮುಂದೆ ನಾನು ಮೀಡಿಯಾ ಅಡ್ರೆಸ್ ಮಾಡಲ್ಲ. ನನಗೆ ಇನ್‌ಸ್ಟ್ರಕ್ಷನ್‌ ಬಂದಿದೆ. ಏನಾದರೂ ಇದ್ದರೆ ನಾನೇ ಕರೆದು ಬಂದು ಮಾತನಾಡುತ್ತೇನೆ. ಸುಮ್ನೆ ನೀವು ಇಲ್ಲಿ ಕಾಯೋದು ಬೇಡ ಎಂದು ತಿಳಿಸಿದರು.

ಸುದ್ದಗುಂಟೆಪಾಳ್ಯದ ಭಾರತಿ ಲೇಔಟ್‌ನಲ್ಲಿ ಏ. 3ರಂದು ಮಧ್ಯರಾತ್ರಿ ಯುವತಿಯನ್ನು ಹಿಂಬಾಲಿಸಿ ಯುವಕನೊಬ್ಬ ಅನುಚಿತವಾಗಿ ವರ್ತಿಸಿದ್ದ. ಈ ವಿಚಾರಕ್ಕೆ ಪ್ರತಿಕ್ರಿಯಿಸಿದ್ದ ಪರಮೇಶ್ವರ್‌ ದೊಡ್ಡ ನಗರದಲ್ಲಿ ಅಲ್ಲಿ ಇಲ್ಲಿ ಇಂತಹ ಘಟನೆಗಳು ನಡೆಯುತ್ತವೆ ಎಂದು ಹೇಳಿದ್ದರು. ಈ ಹೇಳಿಕೆಗೆ ಭಾರೀ ಟೀಕೆ ವ್ಯಕ್ತವಾಗಿತ್ತು.

ವಿರೋಧ ವ್ಯಕ್ತವಾಗುತ್ತಿದ್ದಂತೆ ಪ್ರತಿಕ್ರಿಯಿಸಿದ ಪರಮೇಶ್ವರ್‌, ಒಂದು ವೇಳೆ ನನ್ನ ಹೇಳಿಕೆ ನಾಡಿನ ತಾಯಂದಿರ ಮನಸ್ಸಿಗೆ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದಿದ್ದರು.


Spread the love

LEAVE A REPLY

Please enter your comment!
Please enter your name here