ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚಿದ್ದು ಭಾರತೀಯ ಸೈನಿಕರು ಪಾಕಿಸ್ತಾನದ ಮೇಲೆ ನಿರಂತರ ದಾಳಿ ಮಾಡುತ್ತಿದ್ದಾರೆ. ಈ ಬೆನ್ನಲ್ಲೇ ರಾಕಿಂಗ್ ಸ್ಟಾರ್ ಯಶ್ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ವೊಂದನ್ನು ಹಂಚಿಕೊಂಡಿದ್ದಾರೆ. ಭಾರತ ಮತ್ತು ಪಾಕ್ ನಡುವಿನ ಯುದ್ಧದ ಸನ್ನಿವೇಶದ ಕುರಿತು ತಪ್ಪು ಮಾಹಿತಿ ಹಂಚಿಕೊಳ್ಳಬೇಡಿ ಎಂದು ಮನವಿ ಮಾಡಿದ್ದಾರೆ.
ನಮ್ಮ ಭಾರತೀಯ ಸಶಸ್ತ್ರ ಪಡೆಗಳ ಅಚಲ ಶಕ್ತಿ ಮತ್ತು ಕಾರ್ಯಕ್ಕೆ ಧನ್ಯವಾದಗಳು. ಭಾರತೀಯ ಯೋಧರ ಸೇವೆಗೆ ಧನ್ಯವಾದ ತಿಳಿಸುವುದರ ಜೊತೆಗೆ ಒಗ್ಗಟ್ಟಿನಿಂದ ನಿಂತು ಜವಾಬ್ದಾರಿಯುತವಾಗಿ ವರ್ತಿಸೋಣ. ಸಾಮಾಜಿಕ ಜಾಲತಾಣದಲ್ಲಿ ಯಾವುದಾದರೂ ವಿಚಾರ ಹಂಚಿಕೊಳ್ಳುವ ಮುನ್ನ ಮೊದಲು ಪರಿಶೀಲಿಸಿ ಎಂದಿದ್ದಾರೆ. ತಪ್ಪು ಮಾಹಿತಿಯ ವಿರುದ್ಧ ನಿಲ್ಲೋಣ. ಜೈ ಹಿಂದ್ ಎಂದು ಯಶ್ ಬರೆದುಕೊಂಡಿದ್ದಾರೆ.
ಈ ಹಿಂದೆ ಏಪ್ರಿಲ್ 23ರಂದು ನಡೆದ ಪಹಾಲ್ಗಾಮ್ ದಾಳಿಯ ಬಗ್ಗೆ ಯಶ್ ಟ್ವೀಟ್ ಮಾಡಿ ಮೃತರ ಕುಟುಂಬಕ್ಕೆ ಸಂತಾಪ ವ್ಯಕ್ತಪಡಿಸಿದ್ದರು. ಅದಾದ ಬಳಿಕ ಮತ್ತೆ ಇಂದು ಟ್ವೀಟ್ ಮಾಡಿ ಭಾರತೀಯ ಸೇನೆಗೆ ಅಭಿನಂದನೆಗಳನ್ನು ವ್ಯಕ್ತಪಡಿಸಿದ್ದಾರೆ.
ಏಪ್ರಿಲ್ 23 ರಂದು ನಡೆದ ಪಹಲ್ಗಾಮ್ ದಾಳಿಗೆ ಪ್ರತಿಕಾರವಾಗಿ ಭಾರತವು ಪಿಓಕೆಗೆ ನುಗ್ಗಿ ಅಲ್ಲಿನ ಉಗ್ರರ ಅಡಗುತಾಣಗಳ ಮೇಲೆ ಬಾಂಬ್ ಮಳೆಗರಿದಿತ್ತು. ಈ ದಾಳಿಯಲ್ಲಿ ಹಲವಾರು ಉಗ್ರರು ಮೃತಪಟ್ಟಿದ್ದಾರೆ. ಈ ಮಿಲಿಟರಿ ಕಾರ್ಯಾಚರಣೆಗೆ ಆಪರೇಷನ್ ಸಿಂಧೂರ್ ಎಂದು ಹೆಸರಿಡಲಾಗಿತ್ತು. ಇದೀಗ ಆಪರೇಷನ್ ಸಿಂಧೂರದ ಬಳಿಕ ಪಾಕ್ ಸೈನ್ಯ ಭಾರತದ ವಿರುದ್ಧ ಅಪ್ರಚೋದಿತ ದಾಳಿ ನಡೆಸಿದ್ದು, ಭಾರತೀಯ ಸೇನೆಯು ಅದಕ್ಕೆ ದಿಟ್ಟ ಪ್ರತ್ಯುತ್ತರ ನೀಡುತ್ತಿದೆ.