HomeKarnataka Newsಮುಖ್ಯಮಂತ್ರಿ ಸ್ಥಾನಕ್ಕೆ ಡಜನ್ ನಾಯಕರ ಕ್ಯೂ: ಛಲವಾದಿ ನಾರಾಯಣಸ್ವಾಮಿ

ಮುಖ್ಯಮಂತ್ರಿ ಸ್ಥಾನಕ್ಕೆ ಡಜನ್ ನಾಯಕರ ಕ್ಯೂ: ಛಲವಾದಿ ನಾರಾಯಣಸ್ವಾಮಿ

For Dai;y Updates Join Our whatsapp Group

ಬಾಗಲಕೋಟೆ: ರಾಜ್ಯ ಸರಕಾರದ ಆಡಳಿತದ ಎರಡೂವರೆ ವರ್ಷ ಮುಗಿದಿದೆ. ಇಲ್ಲಿನವರೆಗೆ ಆಗಿದ್ದೇನು? ಮುಂದೆ ಆಗಬೇಕಾದುದೇನು ಎಂಬ ರೋಡ್‍ಮ್ಯಾಪ್ ಈ ಸರಕಾರಕ್ಕೆ ಇಲ್ಲ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಟೀಕಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ಒಬ್ಬರದು ಎರಡೂವರೆ ವರ್ಷ ಮುಖ್ಯಮಂತ್ರಿ ಸ್ಥಾನ ಮುಗಿದಿದೆ; ಈಗ ಅಧಿಕಾರ ಹಸ್ತಾಂತರ ಮಾಡಿ ನಮಗೆ ಕೊಡಿ ಎಂಬುದೇ ಅವರ ಪ್ರಯತ್ನ. ಆ ರೀತಿ ಕೊಡುವ ಸಂದರ್ಭದಲ್ಲಿ ಒಂದು ಡಜನ್ ಲೀಡರ್‍ಗಳು ಈಗ ಕ್ಯೂನಲ್ಲಿ ನಿಂತಿದ್ದಾರೆ ಎಂದು ಕಾಣಿಸುವುದಾಗಿ ತಿಳಿಸಿದರು.

ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿಯಲ್ಲಿ ಬಹಳ ಹಿಂದೆ ಬಿದ್ದಿದೆ, ಅಂದರೆ ಅದು ಅಭಿವೃದ್ಧಿಶೂನ್ಯವಾಗಿದೆ ಎಂದು ಆರೋಪಿಸಿದರು. ಕೇವಲ ಕೆಲವು ಗ್ಯಾರಂಟಿ ಕೊಟ್ಟಿದ್ದೇವೆ, ಇದರಲ್ಲೇ 5 ವರ್ಷ ಕಾಲಹರಣ ಮಾಡಬಹುದೆಂಬ ಭಾವನೆಯಲ್ಲಿ ಈ ಸರಕಾರ ಇದ್ದ ಹಾಗಿದೆ ಎಂದು ಆಕ್ಷೇಪಿಸಿದರು.

ಅವರು ಮಾಡುವ ದುಂಡಾವರ್ತಿ, ಭ್ರಷ್ಟಾಚಾರ, ಕಾನೂನಾತ್ಮಕವಾಗಿ ಅನೇಕ ವಿಚಾರಗಳನ್ನು ಅವರು ತಿರುಚಿ ಕೆಲಸ ಮಾಡುತ್ತಿರುವುದನ್ನು ನೋಡಿದ್ದೇವೆ. ಅವರ ಸರಕಾರದಲ್ಲಿ ಭಾಗಿಯಾದವರೇ ಈ ರಾಜ್ಯ ಭ್ರಷ್ಟಾಚಾರದಲ್ಲಿ ನಂಬರ್ 1 ಆಗಿದೆ ಎಂದು ಹೇಳುತ್ತಾರೆ ಎಂದು ವಿವರಿಸಿದರು.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img