ವಿಜಯಸಾಕ್ಷಿ ಸುದ್ದಿ, ಗದಗ: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಡಾ. ಬಸವರಾಜ ಬಳ್ಳಾರಿ ಅವರನ್ನು ಜಿಲ್ಲಾಡಳಿತ ಭವನದ ಲಕ್ಕುಂಡಿ ಪಾರಂಪರಿಕ ಅಭಿವೃದ್ಧಿ ಪಾಧಿಕಾರದ ಕಚೇರಿಯಲ್ಲಿ ಶುಕ್ರವಾರ ಸನ್ಮಾಸಿಲಾಯಿತು.
Advertisement
ಈ ಸಂದರ್ಭದಲ್ಲಿ ಲಕ್ಕುಂಡಿ ಪ್ರಾಧಿಕಾರ ಆಯುಕ್ತ ಡಾ. ಶರಣು ಗೊಗೇರಿ, ರಾಜ್ಯ ಸರಕಾರಿ ನೌಕರರ ಸಂಘದ ನಿಕಟಪೂರ್ವ ಅಧ್ಯಕ್ಷ ರವಿ ಗುಂಜೀಕರ, ಜಿಲ್ಲಾ ನೌಕರ ಸಂಘದ ಖಜಾಂಚಿ ಮಹಾಂತೇಶ ನಿಟ್ಟಾಲಿ, ವಾರ್ತಾಧಿಕಾರಿ ವಸಂತ ಮಡ್ಲೂರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ವೀರಯ್ಯಸ್ವಾಮಿ ಬಿ, ವಯಸ್ಕರ ಶಿಕ್ಷಣಾಧಿಕಾರಿ ಶಿವಕುಮಾರ ಕುರಿಯವರ, ಡಯಟ್ ಉಪನ್ಯಾಸಕ ಎಚ್.ಬಿ. ರಡ್ಡೇರ, ಡಿಡಿಪಿಐ ಕಛೇರಿ ಪರಿವೀಕ್ಷಕ ಶ್ರೀಧರ ಬಡಿಗೇರ, ಕರೀಂ ಸುಣಗಾರ ಹಾಜರಿದ್ದರು.