ವಿಜಯಸಾಕ್ಷಿ ಸುದ್ದಿ, ಗದಗ: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಗದಗ ಘಟಕದ ಜಿಲ್ಲಾಧ್ಯಕ್ಷರಾಗಿ ರವಿ ಎಲ್. ಗುಂಜಿಕರ ಸತತ ಮೂರು ಅವಧಿಗೆ ಅವಿರೋಧವಾಗಿ ಆಯ್ಕೆಯಾಗಿದ್ದರು. ಅವರ ಸೇವಾ ನಿವೃತ್ತಿಯಿಂದ ತೆರವಾಗಿದ್ದ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಗುರುವಾರ ಸರಕಾರಿ ನೌಕರರ ಭವನದಲ್ಲಿ ಚುನಾವಣೆ ನಡೆದು, ಡಾ. ಬಸವರಾಜ ಬಳ್ಳಾರಿ 55 ಮತಗಳನ್ನು ಪಡೆಯುವ ಮೂಲಕ ವಿಜಯಶಾಲಿಯಾಗಿರುವುದಕ್ಕೆ ಬೆಂಗಳೂರಿನ ಅಮ್ಮ ಫೌಂಡೇಷನ್ ಅದ್ಯಕ್ಷರು ಹಾಗೂ ಸದಸ್ಯರು ಹರ್ಷ ವ್ಯಕ್ತಪಡಿಸಿದರು.
ಡಾ. ಬಸವರಾಜ ಬಳ್ಳಾರಿ ಅವರು ಮೊದಲು ವಸತಿ ನಿಲಯದ ನಿಲಯಪಾಲಕರಾಗಿ ಕಾರ್ಯ ನಿರ್ವಹಿಸಿ, ಸದ್ಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಗದಗ ತಾಲೂಕು ಅಧಿಕಾರಿಗಳಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ನಮ್ಮ ಅಮ್ಮ ಫೌಂಡೇಷನ್ ಮಾರ್ಗದರ್ಶಕರೂ ಆಗಿ ಫೌಂಡೇಷನ್ ವತಿಯಿಂದ ಹಲವಾರು ಸಾಮಾಜಿಕ, ಶೈಕ್ಷಣಿಕ ಕಾರ್ಯಗಳನ್ನು ಮಾಡುವುದಕ್ಕೆ ಮಾರ್ಗದರ್ಶನ ನೀಡುತ್ತ ನಮ್ಮ ಬೆನ್ನೆಲುಬಾಗಿ ನಿಂತಿದ್ದಾರೆ ಎಂದರು.
ಅಮ್ಮ ಫೌಂಡೇಷನ್ ಅಧ್ಯಕ್ಷರು ಹಾಗೂ ವಕೀಲರಾದ ಮೈಲಾರಪ್ಪ ಡಿ.ಎಚ್ ಮಾತನಾಡಿ, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಬಸವರಾಜ ಬಳ್ಳಾರಿ ಅವರು ನೌಕರರ ಕ್ಷೇಮಾಭಿವೃದ್ಧಿ ಜೊತೆಗೆ ಜನಸಾಮಾನ್ಯರ ಸಮಸ್ಯೆಗಳಿಗೆ ತಮ್ಮ ಹಂತದಲ್ಲಿ ಶ್ರಮಿಸಿ ಮಾದರಿ ಅಧ್ಯಕ್ಷರಾಗುವಲ್ಲಿ ಸಂದೇಹವಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕಾರ್ಯದರ್ಶಿ ವಿಶ್ವನಾಥ ದಲಾಲಿ ಮಾತನಾಡಿ, ನಮ್ಮ ಅಮ್ಮ ಫೌಂಡೇಷನ್ ವತಿಯಿಂದ ಬಡ ಮಕ್ಕಳಿಗಾಗಿ ಪುಸ್ತಕಗಳು, ಅವಶ್ಯ ಸಾಮಗ್ರಿಗಳನ್ನು ಒದಗಿಸುವುದು, ಆರೋಗ್ಯ ಶಿಬಿರ, ಪರಿಸರ ಸಂರಕ್ಷಣೆಯ ಕಾರ್ಯಕ್ಕೆ ಅಮ್ಮ ಫೌಂಡೇಷನ್ ಮಾರ್ಗದರ್ಶಕರಾದ ಬಳ್ಳಾರಿ ಅವರು ಸದಾ ಸಹಕಾರ ನೀಡುತ್ತಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಖಜಾಂಚಿ ಮಾರುತಿ ಜಿ.ಎಚ್, ಸಂಘಟನಾ ಕಾರ್ಯದರ್ಶಿ ಸುರೇಶ ಹಾಳಕೇರಿ, ಸಾಂಸ್ಕೃತಿಕ ಕಾರ್ಯದರ್ಶಿ ಪರಶುರಾಮ ತಳವಾರ, ಅಣ್ಣಪ್ಪ ಗುತ್ತೆಮ್ಮನವರ, ಕಿರಣ, ಶಿವು ದೊಡ್ಡಮನಿ ಇತರರು ಇದ್ದರು.