ಡಾ. ಹೆಚ್.ಕೆ. ಪಾಟೀಲ ಸೇವಾ ತಂಡದ ಸಹಯೋಗದಲ್ಲಿ ಉಚಿತ ನೇತ್ರ ಪರೀಕ್ಷಾ ಶಿಬಿರ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ಹುಲಕೋಟಿಯ ಕೆ.ಎಚ್. ಪಾಟೀಲ ಆಸ್ಪತ್ರೆ ಹಾಗೂ ಸಂಶೋಧನಾ ಸಂಸ್ಥೆಯ ವತಿಯಿಂದ ಡಾ. ಹೆಚ್.ಕೆ. ಪಾಟೀಲ ಸೇವಾ ತಂಡದ ಸಹಯೋಗದಲ್ಲಿ ಗದಗ-ಬೆಟಗೇರಿಯ ವಾರ್ಡ್ ನಂ.5ರ ನರಸಾಪೂರ ಆಶ್ರಯ ಕಾಲೋನಿಯಲ್ಲಿ ಉಚಿತ ನೇತ್ರ ಪರೀಕ್ಷಾ ಶಿಬಿರ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು.

Advertisement

ಶಿಬಿರದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಹೆಚ್.ಕೆ. ಪಾಟೀಲ ಸೇವಾ ತಂಡದ ಕ್ಯಾಪ್ಟನ್ ಶಾಕೀರ ಕಾತರಕಿ, ಕಾಂಗ್ರೆಸ್ ಮೀನುಗಾರಿಕೆ ವಿಭಾಗ ಮುಂಚೂಣಿ ಘಟಕದ ಅಧ್ಯಕ್ಷ ಸಂಗಮೇಶ ಹಾದಿಮನಿ, ನಾಗರಾಜ ಮುಳ್ಳಾಳ, ಕಾಂಗ್ರೆಸ್ ಮುಖಂಡರಾದ ವಾಸು ಜೋಗಿಯವರ ಸಹಕಾರದೊಂದಿಗೆ ೧೫೦ಕ್ಕೂ ಹೆಚ್ಚು ಜನರಿಗೆ ಆರೋಗ್ಯ ತಪಾಸಣೆ ಹಾಗೂ ಕಣ್ಣಿನ ತಪಾಸಣೆ ಮಾಡಲಾಯಿತು.

ಶಿಬಿರದಲ್ಲಿ ಕೆ.ಎಚ್. ಪಾಟೀಲ ಆಸ್ಪತ್ರೆ ಹಾಗೂ ಸಂಶೋಧನಾ ಸಂಸ್ಥೆಯ ವೈದ್ಯರ ತಂಡ ಹಾಗೂ ಸಿಬ್ಬಂದಿ ವರ್ಗದವರು ತಪಾಸಣೆ ನಡೆಸಿದರು. ಸಚಿವ ಎಚ್.ಕೆ. ಪಾಟೀಲರರ ಜನಪರ ಕಾರ್ಯಗಳಿಗೆ ಸಾರ್ವಜನಿಕರು ಪ್ರಶಂಸೆ ವ್ಯಕ್ತಪಡಿಸಿದರು.


Spread the love

LEAVE A REPLY

Please enter your comment!
Please enter your name here