ಕರ್ನಾಟಕ ರಾಜ್ಯ ಸರಕಾರಿ ನೌಕರ ಸಂಘದ ಗದಗ ಜಿಲ್ಲಾ ಗೌರವಾಧ್ಯಕ್ಷರಾಗಿ ಗದಗ ಜಿಲ್ಲೆಯಲ್ಲಿ ಸಂಘಟನೆಯನ್ನು ಬಲಿಷ್ಠಗೊಳಿಸಿ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಗದಗ ತಾಲೂಕು ಅಧಿಕಾರಿಯಾಗಿ ನಿಸ್ವಾರ್ಥ ಸಾರ್ವಜನಿಕ ಸೇವೆಯೊಂದಿಗೆ ಗುರುತಿಸಿಕೊಂಡಿರುವ ಡಾ. ಬಸವರಾಜ ಬಳ್ಳಾರಿ ಅವರ ಸಾಮಾಜಿಕ ಕಳಕಳಿಯನ್ನು ಗುರುತಿಸಿದ ನಟರಂಗ ಕಲ್ಚರಲ್ ಅಕಾಡೆಮಿ ಮತ್ತು ಟ್ರಸ್ಟ್ ಗದಗ ಸಂಘಟಕರು ಮಕ್ಕಳ ಕಲರವ-2024 ಬೇಸಿಗೆ ಶಿಬಿರದ ಅಂಗವಾಗಿ ಅವರನ್ನು ಸನ್ಮಾನಿಸಿ, ಗೌರವಿಸಿದರು. ಈ ಸಂದರ್ಭದಲ್ಲಿ ಟ್ರಸ್ಟ್ನ ಅಧ್ಯಕ್ಷ ಸೋಮಶೇಖರಯ್ಯ ಚಿಕ್ಕಮಠ, ಕಾರ್ಯದರ್ಶಿ ಮೋಹನಕುಮಾರ ಕಟೀಲ್ ಮುಂತಾದವರಿದ್ದರು.