ಡಾ. ತಾರಾ ಅವರಿಗೆ `ಕಿತ್ತೂರು ರಾಣಿ ಚನ್ನಮ್ಮ’ ಪ್ರಶಸ್ತಿ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ವಿಜಯಪುರದ ಕರ್ನಾಟಕ ಮಹಿಳಾ ವಿಶ್ವವಿದ್ಯಾಲಯದಿಂದ ಕರ್ನಾಟಕ `ಚರಿತ್ರೆಯಲ್ಲಿ ಮಹಿಳಾ ಆಡಳಿತಗಾರರು’ ಎಂಬ ವಿಷಯದ ಕುರಿತು ಪಿಎಚ್‌ಡಿ ಪಡೆದಿರುವ ಡಾ. ತಾರಾ ಬಿ.ಎನ್ ಅವರಿಗೆ ಕರ್ನಾಟಕ ಇತಿಹಾಸ ಪರಿಷತ್ತು ಕಿತ್ತೂರು ರಾಣಿ ಚನ್ನಮ್ಮ ಪ್ರಶಸ್ತಿ ನೀಡಿ ಗೌರವಿಸಿದೆ ಎಂದು ಪರಿಷತ್ತಿನ ಪ್ರಧಾನ ಕಾರ್ಯದರ್ಶಿ ಪ್ರೊ. ಈರಣ್ಣ ಪತ್ತಾರ ತಿಳಿಸಿದ್ದಾರೆ.

Advertisement

ವಿಚಾರ ತರಂಗ, ಮೌನಗೀತೆ, ಸಾಮಾಜಿಕ ಸುಧಾರಣೆಗಳು ಮತ್ತು ಭಾರತೀಯ ರಾಷ್ಟ್ರೀಯ ಚಳುವಳಿಗಳು, ಅಧುನಿಕ ಭಾರತದ ಇತಿಹಾಸ, ಸಮಕಾಲೀನ ಭಾರತ ಮತ್ತು ಸಮಕಾಲೀನ ಕರ್ನಾಟಕ, ಭಾರತದ ಇತಿಹಾಸ- ಆರಂಭ ಕಾಲದಿಂದ ಶಾತವಾಹನರವರೆಗೆ ಎಂಬ ಗ್ರಂಥಗಳನ್ನು ರಚಿಸಿದ್ದಾರೆ. ಇವರ ಸಂಶೋಧನೆ, ಅಧ್ಯಯನ ಮತ್ತು ಎನ್‌ಎಸ್‌ಎಸ್ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಅನೇಕ ಕಾರ್ಯಗಳನ್ನು ನಿರ್ವಹಿಸಿರುವದನ್ನು ಗುರುತಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.


Spread the love

LEAVE A REPLY

Please enter your comment!
Please enter your name here