HomeGadag Newsಜಲ ಸಂರಕ್ಷಣೆ ಕುರಿತು ವಿದ್ಯಾರ್ಥಿಗಳಿಂದ ಚಿತ್ರಕಲಾ ಸ್ಪರ್ಧೆ

ಜಲ ಸಂರಕ್ಷಣೆ ಕುರಿತು ವಿದ್ಯಾರ್ಥಿಗಳಿಂದ ಚಿತ್ರಕಲಾ ಸ್ಪರ್ಧೆ

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಗದಗ: ಜಲ ಸಂರಕ್ಷಣೆ ಹಾಗೂ ನೀರಿನ ಸದ್ಬಳಕೆ ಕುರಿತು ಜನಜಾಗೃತಿ ಮೂಡಿಸುವ ಉದ್ದೇಶದಿಂದ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಜಿಲ್ಲಾಮಟ್ಟದ ಚಿತ್ರಕಲಾ ಸ್ಪರ್ಧೆ ಗದಗ ನಗರದ ಸಿ.ಡಿ.ಓ. ಜೈನ್ ಶಾಲೆಯಲ್ಲಿ ನಡೆಯಿತು.

ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ, ಅಂತರ್ಜಲ ನಿರ್ದೇಶನಾಲಯ ಬೆಂಗಳೂರು, ಜಿಲ್ಲಾ ಅಂತರ್ಜಲ ಕಚೇರಿ ಗದಗ, ಶಾಲಾ ಶಿಕ್ಷಣ ಇಲಾಖೆ ಹಾಗೂ ವಿಜಯನಗರ ಶುಗರ್ಸ್ ಪ್ರೈವೇಟ್ ಲಿಮಿಟೆಡ್, ಗಂಗಾಪುರ ಇವರ ಸಂಯುಕ್ತ ಆಶ್ರಯದಲ್ಲಿ ‘ನಮ್ಮ ಭೂಮಿ–ನಮ್ಮ ನೀರು–ನಮ್ಮ ಶಕ್ತಿ’ ಹಾಗೂ ‘ನೀರಿದ್ದರೆ–ನಾಳೆ’ ಘೋಷವಾಕ್ಯದಡಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಗಿಡಕ್ಕೆ ನೀರೆರೆಯುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಬಳಿಕ ಜಲ ಸಂರಕ್ಷಣೆ ಮತ್ತು ಸದ್ಬಳಕೆ ಕುರಿತು ವಿಶೇಷ ಉಪನ್ಯಾಸ ನಡೆಯಿತು. ಜಿಲ್ಲಾ ಅಂತರ್ಜಲ ಕಚೇರಿಯ ಭೂವಿಜ್ಞಾನಿ ಪ್ರವೀಣ ಕರಬಸಣ್ಣವರ ಸ್ವಾಗತಿಸಿದರು. ಭೂವಿಜ್ಞಾನಿ ಮಲ್ಲಪ್ಪ ಕಲ್ಲಾಪೂರ ಪ್ರಾಸ್ತಾವಿಕವಾಗಿ ಮಾತನಾಡಿದರು. ನಂತರ ವಿದ್ಯಾರ್ಥಿಗಳಿಗೆ ಜಲ ಪ್ರತಿಜ್ಞೆ ಬೋಧಿಸಲಾಯಿತು.

ಹಿರಿಯ ಭೂವಿಜ್ಞಾನಿ ಸಂತೋಷ ಪ್ಯಾಟಿಗಾಣಿಗೇರ ಅವರು ನೀರಿನ ಮಹತ್ವ ಹಾಗೂ ಪ್ರಸ್ತುತ ಜಲ ಪರಿಸ್ಥಿತಿ ಕುರಿತು ಮಾತನಾಡಿದರು.

ವಿಜಯನಗರ ಶುಗರ್ಸ್ ಪ್ರೈವೇಟ್ ಲಿಮಿಟೆಡ್ ವ್ಯವಸ್ಥಾಪಕ ಶಂಕರಗೌಡ್ರ ಅವರು ನೀರಿನ ಅಗತ್ಯತೆ ಹಾಗೂ ಸದ್ಬಳಕೆಯ ಕುರಿತು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಉಪ ನಿರ್ದೇಶಕರ ಕಚೇರಿಯ ವಿಷಯ ಪರಿವೀಕ್ಷಕಿ ಗೀತಾ ಕುಲಕರ್ಣಿ ಅವರು ನೀರು ಸಂರಕ್ಷಣೆ, ಸದ್ಬಳಕೆ ಹಾಗೂ ಮಳೆನೀರು ಸಂಗ್ರಹಣೆಯ ಮಹತ್ವವನ್ನು ವಿವರಿಸಿದರು.

ನಂತರ ನಡೆದ ಚಿತ್ರಕಲಾ ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳು ಜಲ ಸಂರಕ್ಷಣೆ ಹಾಗೂ ನೀರಿನ ಸದ್ಬಳಕೆಯ ಕುರಿತು ಚಿತ್ರಗಳನ್ನು ಬಿಡಿಸುವ ಮೂಲಕ ಜಾಗೃತಿ ಮೂಡಿಸಿದರು.

ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನಗಳೊಂದಿಗೆ ಪ್ರಶಂಸಾಪತ್ರ ನೀಡಿ ಅಭಿನಂದಿಸಲಾಯಿತು.

ತಿರುಮಲರೆಡ್ಡಿ, ಟಿ.ಆರ್. ಬೇವಿನಮರದ, ಎನ್.ಎಂ. ಚಿತ್ರಗಾರ, ಎಚ್.ಎಸ್. ಬ್ಯಾಳಿ, ಮಲ್ಲಪ್ಪ ಕಲ್ಲಾಪೂರ, ಪ್ರವೀಣ ಕರಬಸಣ್ಣವರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು. ಶೋಭಾ ಹುಲಿ ನಿರೂಪಿಸಿದರು. ಪ್ರವೀಣ ಕರಬಸಣ್ಣವರ ವಂದಿಸಿದರು.

“ನೀರಿನ ಸಂರಕ್ಷಣೆ ಇಂದಿನ ಅಗತ್ಯ ಮಾತ್ರವಲ್ಲ; ಮುಂದಿನ ಪೀಳಿಗೆಯ ಬದುಕಿನ ಭದ್ರತೆಗೆ ನಮ್ಮೆಲ್ಲರ ಜವಾಬ್ದಾರಿಯಾಗಿದೆ.”

— ಸಂತೋಷ ಪ್ಯಾಟಿಗಾಣಿಗೇರ, ಹಿರಿಯ ಭೂವಿಜ್ಞಾನಿ

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img