ತಪ್ಪಿದ ಚಾಲಕನ ನಿಯಂತ್ರಣ: ಆಟೋ ಪಲ್ಟಿ, ಯುವಕ ದುರ್ಮರಣ!

0
Spread the love

ಬಳ್ಳಾರಿ:- ಇಂದು ಕರ್ನಾಟಕದ ನಾನಾ ಭಾಗದಲ್ಲಿ ರಸ್ತೆ ಅಪಘಾತ ಸಂಭವಿಸಿದೆ. ಅದರಂತೆ ಕಂಪ್ಲಿಯ ತುಂಗಭದ್ರಾ ಸೇತುವೆ ಮೇಲೆ ಎಕ್ಸೆಲ್ ತುಂಡಾದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿದ ರಿಕ್ಷಾ ಪಲ್ಟಿಯಾಗಿ ಯುವಕ ಸಾವನ್ನಪ್ಪಿದ ಘಟನೆ ಜರುಗಿದೆ.

Advertisement

24 ವರ್ಷದ ಎನ್.ಆಸ್ಲಾಂ ಮೃತ ಯುವಕ ಎನ್ನಲಾಗಿದೆ. ಗಂಗಾವತಿಯಿಂದ ಕಂಪ್ಲಿಗೆ ತುಂಗಭದ್ರಾ ನದಿ ಸೇತುವೆ ಮೇಲೆ ಬರುತ್ತಿದ್ದಾಗ ರಿಕ್ಷಾದ ಎಕ್ಸೆಲ್ ತುಂಡಾಗಿದೆ. ಪರಿಣಾಮ ರಿಕ್ಷಾ ನಿಯಂತ್ರಣ ತಪ್ಪಿ ನೆಲಕ್ಕೆ ವಾಲಿದ್ದರಿಂದ ಪ್ರಯಾಣಿಕರು ಕೆಳಗೆ ಬಿದ್ದು ಗಾಯಗೊಂಡಿದ್ದರು.

ಎನ್.ಆಸ್ಲಾಂ ತಲೆಗೆ ಗಂಭೀರ ಗಾಯವಾಗಿತ್ತು. ಕೂಡಲೇ ಚಿಕಿತ್ಸೆಗೆಂದು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಗಂಗಾವತಿಯ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಘಟನೆಯಲ್ಲಿ ಆಮೀನಾಬೀ ಎನ್ನುವ ವೃದ್ಧೆಯ ಕಾಲುಗಳಿಗೆ ತೀವ್ರ ಪೆಟ್ಟಾಗಿದ್ದು ಬಳ್ಳಾರಿಯ ವಿಮ್ಸ್ ಗೆ ದಾಖಲಿಸಲಾಗಿದೆ.


Spread the love

LEAVE A REPLY

Please enter your comment!
Please enter your name here