ಶಿವಮೊಗ್ಗ:– ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕೆರೆಗೆ ಪಲ್ಟಿ ಹೊಡೆದಿರುವ ಘಟನೆ ರಿಪ್ಪನ್ಪೇಟೆಯ ತಾವರೆಕೆರೆಯಲ್ಲಿ ಜರುಗಿದೆ.
Advertisement
ಘಟನೆ ಬೆನ್ನಲ್ಲೇ ಸ್ಥಳೀಯರು ಸಹಾಯಕ್ಕೆ ಧಾವಿಸಿದ್ದು, ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹಾಸನದಿಂದ ಕೊಲ್ಲೂರಿಗೆ ಮಾರುತಿ ಆಲ್ಟೋ ಕಾರಿನಲ್ಲಿ ಮೂವರು ತೆರಳುತ್ತಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ತಾವರೆಕೆರೆಗೆ ಕಾರು ಉರುಳಿದೆ. ಕಾರು ಕೆರೆಗೆ ಉರುಳುತ್ತಿದ್ದಂತೆ ತಕ್ಷಣ ಸ್ಥಳಿಯರು ಕಾರನ್ನು ಬದಿಗೆ ತಂದು, ಮೂರನ್ನು ಸುರಕ್ಷಿತವಾಗಿ ಮೇಲೆತ್ತಿದ್ದಾರೆ.
ರಿಪ್ಪನ್ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.


