ಚಿಕ್ಕಮಗಳೂರು: ಹಾಲಿನ ಟ್ಯಾಂಕರ್ ಒಂದು ಪಲ್ಟಿ ಹೊಡೆದ ಪರಿಣಾಮ ಸಾವಿರಾರು ಲೀಟರ್ ಹಾಲು ಮಣ್ಣುಪಾಲಾಗಿರುವ ಘಟನೆ ಜರುಗಿದೆ.
Advertisement
ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಬುಕ್ಕಸಾಗರ ಗೇಟ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಸಾವಿರಾರು ಲೀ.ಹಾಲಿನ ಟ್ಯಾಂಕರ್ ಪಲ್ಟಿಯಾದ ಘಟನೆ ಜರುಗಿದೆ. ರಸ್ತೆ ಬದಿ ನಿಂತಿದ್ದ ಪಿಕಪ್ ವಾಹನದ ಮೇಲೆ ಹಾಲಿನ ಟ್ಯಾಂಕರ್ ಬಿದ್ದಿದೆ. ಚಾಲಕನಿಗೆ ಗಂಭೀರ ಗಾಯಗಳಾಗಿವೆ.
ಘಟನೆಯಿಂದ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಟ್ಯಾಂಕರ್ ಪಲ್ಟಿಯಾಗಿದ್ದರಿಂದ ಸಾವಿರಾರು ಲೀಟರ್ ಹಾಲು ಮಣ್ಣುಪಾಲಾಯಿತು. ರಸ್ತೆಯಲ್ಲಿ ನೀರಿನಂತೆ ಹಾಲು ಹರಿದಿದೆ.