ಚಿಕ್ಕಮಗಳೂರು:- ಕಳಸ ತಾಲೂಕಿನ ಕಲ್ಮಕ್ಕಿ-ಕಂಚಿಗಾನೆ ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿದ ಪ್ರವಾಸಿ ಬಸ್ಸೊಂದು ರಸ್ತೆಯ ತಿರುವಿನಲ್ಲಿ ಪಲ್ಟಿಯಾಗಿರುವ ಘಟನೆ ಜರುಗಿದೆ.
ರಾಜಧಾನಿ ಬೆಂಗಳೂರಿನಿಂದ ಹೊರನಾಡಿಗೆ ಪ್ರವಾಸಕ್ಕೆಂದು ತೆರಳುತ್ತಿದ್ದ ಬಸ್ಸಿನಲ್ಲಿ ಸುಮಾರು 45ಕ್ಕೂ ಹೆಚ್ಚು ಪ್ರವಾಸಿಗರಿದ್ದರು. ಅಪಘಾತದ ತೀವ್ರತೆಗೆ ಇಬ್ಬರು ಪ್ರವಾಸಿಗರು ಗಂಭೀರವಾಗಿ ಗಾಯಗೊಂಡಿದ್ದು, ಉಳಿದ ಹಲವು ಪ್ರವಾಸಿಗರಿಗೆ ಸಣ್ಣ-ಪುಟ್ಟ ಗಾಯಗಳಾಗಿವೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎನ್ನಲಾಗಿದೆ.
ಸದ್ಯ ಗಾಯಾಳುಗಳನ್ನು ಚಿಕಿತ್ಸೆಗಾಗಿ ಕಳಸದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಸ್ಥಳಕ್ಕೆ ಕಳಸ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.



