ಚಾಲಕ ಪರಾರಿ, ಪೊಲೀಸರ ಭೇಟಿ, ಪರಿಶೀಲನೆ…
ವಿಜಯಸಾಕ್ಷಿ ಸುದ್ದಿ, ಗದಗ
ಶಾಮಿಯಾನ ಸಾಗಾಟ ಮಾಡುತ್ತಿದ್ದ ಕ್ಯಾಂಟರ್ವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಪರಿಣಾಮವಾಗಿ ಮೂವರು ಮೃತಪಟ್ಟು, ಇನ್ನಿಬ್ಬರು ಗಾಯಗೊಂಡ ದುರ್ಘಟನೆ ಜರುಗಿದೆ.
ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಹಳ್ಳಿಗುಡಿ ಗ್ರಾಮದ ಬಳಿ ಘಟನೆ ಜರುಗಿದ್ದು, ನವೀನ ಕುಂಬಾರ (23) ಎಂಬಾತ ಸ್ಥಳದಲ್ಲೇ ಮೃತಪಟ್ಟಿದ್ದು, ಗಂಭೀರವಾಗಿ ಗಾಯಗೊಂಡಿದ್ದ ನಾಗರಾಜ್ ಕಾಳಿ (22) ಹಾಗೂ ಗಂಗಾಧರ ಅಕ್ಕಿ (23) ಜಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಮೃತರು ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಹಿರೇನೆರ್ತಿ ಗ್ರಾಮದವರಿದ್ದು, ಕುಂದಗೋಳದ ಎಸ್ಆರ್ಎಮ್ ಶಾಮಿಯಾನದಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.
ಕುಂದಗೋಳ ಪಟ್ಟಣದಿಂದ ಕೊಪ್ಪಳ ಜಿಲ್ಲೆಯ ಕನಕಗಿರಿಗೆ ಹೋಗುತ್ತಿದ್ದಾಗ ಹಳ್ಳಿಗುಡಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಕ್ಯಾಂಟರ್ ಪಲ್ಟಿಯಾಗಿದೆ.
ಚಾಲಕ ಪರಾರಿಯಾಗಿದ್ದು, ಸುದ್ದಿ ತಿಳಿದು ಮುಂಡರಗಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮುಂಡರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.