ವಿಜಯಪುರ:- ಭೀಕರ ಕಾರು ಅಪಘಾತದಲ್ಲಿ ಮೂವರು ಸಾವನ್ನಪ್ಪಿದ ಘಟನೆ ತಾಲೂಕಿನ ಕನ್ನಾಳ ಕ್ರಾಸ್ ಬಳಿ NH-50 ರಲ್ಲಿ ಜರುಗಿದೆ.
Advertisement
ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಈ ಅವಘಡ ಸಂಭವಿಸಿದೆ. ಘಟನೆಯಲ್ಲಿ ಕೆಲವರಿಗೆ ಗಂಭೀರ ಗಾಯಗಳಾಗಿದ್ದು, ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಸ್ಥಳಕ್ಕೆ ವಿಜಯಪುರ ಗ್ರಾಮೀಣ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಭಿಷೇಕ್ ಸಾವಂತ್ (23), ವಿಜಯಕುಮಾರ್ ಔರಂಗಾಬಾದ್ (24), ರಾಜು ಬಿರಾದಾರ (23) ಮೃತರು. ರಾಜು ಕಾಂಬಳೆ, ಪೋಳ ಎಂಬವರು ಗಾಯಗೊಂಡಿದ್ದಾರೆ. ಈ ಐವರು ಕಾರಿನಲ್ಲಿ ಸೊಲ್ಲಾಪುರಕ್ಕೆ ಹೋಗಿದ್ದರು. ಅಲ್ಲಿಂದ ಮರಳಿ ಬರುವಾಗ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ.