ಹುಬ್ಬಳ್ಳಿ;-ರಾಜಕಾರಣಿಗಳು ಕೇವಲ ಆರೋಪ, ಪ್ರತ್ಯಾರೋಪಗಳಲ್ಲಿ ಕಾಲ ಕಳೆಯುತ್ತಿರುವುದು ಆತಂಕಕಾರಿ ಎಂದು ವಿಪ ಸಭಾಪತಿ ಬಸವರಾಜ ಹೊರಟ್ಟಿ ಅಸಮಾಧಾನ ವ್ಯಕ್ತಪಡಿಸಿದರು.
Advertisement
ಈ ಸಂಬಂಧ ಮಾತನಾಡಿದ ಅವರು, ಇಂದು ರಾಜಕೀಯ ಸಂಪೂರ್ಣವಾಗಿ ಕಲುಷಿತಗೊಂಡಿದೆ. ರಾಜ್ಯದ ಅಭಿವೃದ್ಧಿಯ ಬಗ್ಗೆ ಚರ್ಚಿಸದೇ ಕೇವಲ ಆರೋಪ, ಪ್ರತ್ಯಾರೋಪಗಳಲ್ಲಿ ಕಾಲ ಕಳೆಯುತ್ತಿರುವುದು ಆತಂಕಕಾರಿ ಎಂದು ವಿಪ ಸಭಾಪತಿ ಬಸವರಾಜ ಹೊರಟ್ಟಿ ಅಸಮಾಧಾನ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಈಗಾಗಲೇ ಅನಾವೃಷ್ಟಿ ಉದ್ಭವವಾಗಿದೆ. ಇಂತಹ ಸಮಯದಲ್ಲಿ ಜನಪ್ರತಿನಿಧಿಗಳು ರಾಜಕಾರಣ ಮಾಡುವುದನ್ನು ಕೈ ಬಿಡಬೇಕು. ರಾಜ್ಯದ ಅಭಿವೃದ್ಧಿಯ ಬಗ್ಗೆ, ಜನರ ಹಿತಾಸಕ್ತಿಯ ಬಗ್ಗೆ ಗಮನಹರಿಸಬೇಕಿದೆ. ಆದರೆ, ಇದು ಆಗದಿರುವುದು ಕಳವಳಕಾರಿ ಸಂಗತಿ ಎಂದು ವಿಷಾಧಿಸಿದರು.