ಗದಗದಲ್ಲಿ ಮಾದಕ ವ್ಯಸನ ಮುಕ್ತ ಜನಜಾಗೃತಿ ಮ್ಯಾರಥಾನ್: SP ಬಿ.ಎಸ್ ನೇಮಗೌಡ ಚಾಲನೆ!

0
Spread the love

ಗದಗ:- ಕರ್ನಾಟಕ ಮತ್ತು ಗದಗ ಜಿಲ್ಲೆಯನ್ನು ಮಾದಕ ವ್ಯಸನ ಮುಕ್ತವಾಗಿಸಲು ಜನಜಾಗೃತಿ ಮ್ಯಾರಥಾನ್ ನಡೆದಿದೆ. ನಗರದ ಕೆ.ಹೆಚ್ ಪಾಟೀಲ್ ಜಿಲ್ಲಾ ಕ್ರೀಡಾಂಗಣದಲ್ಲಿ ಪೊಲೀಸ್ ಇಲಾಖೆ ಹಾಗೂ ಎಸ್‌ಬಿಐ ನೇತೃತ್ವದಲ್ಲಿ ಆಯೋಜನೆ ಮಾಡಲಾದ ಈ ಮ್ಯಾರಥಾನ್ ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್ ನೇಮಗೌಡ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.

Advertisement

ಸೀನಿಯರ್ ಹಾಗೂ ಜೂನಿಯರ್ 2 ತಂಡ ಮೂಲಕ ನಗರದ ಪ್ರಮುಖ ಬೀದಿಗಳಲ್ಲಿ 5 ಕಿ.ಮೀ ಹಾಗೂ 10 ಕಿ.ಮೀ ಮ್ಯಾರಥಾನ್ ನಡೆಸಿದರು. ನಗರದ ಕೆ.ಸಿ ರಾಣಿ ರೋಡ್, ಮಹಾತ್ಮ ಗಾಂಧಿ ಸರ್ಕಲ್, ಹುಯಿಲಗೋಳ ನಾರಾಯಣರಾವ್ ಸರ್ಕಲ್, ಬನ್ನಿ ಕಟ್ಟಿ, ಕಾರ್ಯಪ್ಪ ಸರ್ಕಲ್, ಎಪಿಎಂಸಿ ಮಾರ್ಗವಾಗಿ ಸ್ಟೇಡಿಯಂ ತಲುಪಿದರು. ಮ್ಯಾರಥಾನ್ ಕಾರ್ಯಕ್ರಮದಲ್ಲಿ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ, ಕ್ರೀಡಾ ಇಲಾಖೆ, ಎನ್‌ಎಸ್‌ಎಸ್, ಎನ್.ಸಿ.ಸಿ, ಆರ್.ಡಿ.ಪಿ.ಆರ್. ಯೂನಿವರ್ಸಿಟಿ, ಮೆಡಿಕಲ್, ಇಂಜನಿಯರಿಂಗ್ ಕಾಲೇಜ್ ವಿದ್ಯಾರ್ಥಿಗಳು, ಲಯನ್ಸ್ ಕ್ಲಬ್, ವಿವಿಧ ಸಂಘ ಸಂಸ್ಥೆಗಳ ಸದಸ್ಯರು ಭಾಗಿಯಾಗಿದ್ದರು.

ಕರ್ನಾಟಕ ಮಾದಕ ವ್ಯಸನ ಮುಕ್ತವಾಗಬೇಕು. ಎಲ್ಲರೂ ಫಿಟ್ ಆಗಿರಬೇಕು ಎಂಬ ಜನಜಾಗೃತಿ ಮೂಡಿಸುವುದು ಮ್ಯಾರಥಾನ್ ಉದ್ದೇಶವಾಗಿತ್ತು.


Spread the love

LEAVE A REPLY

Please enter your comment!
Please enter your name here