ತುಮಕೂರು: ಕಲ್ಲುಕ್ವಾರಿಯಲ್ಲಿ ಮದ್ದು ಸ್ಪೋಟ, ಇಬ್ಬರು ಗಂಭೀರ!

0
Spread the love

ತುಮಕೂರು:- ಕಲ್ಲುಕ್ವಾರಿಯಲ್ಲಿ ಇಟ್ಟಿದ್ದ ಮದ್ದು ಸ್ಪೋಟಗೊಂಡು ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಹೊಸಹಳ್ಳಿ ಗ್ರಾಮದ ಬಳಿ ಜರುಗಿದೆ.

Advertisement

ಕ್ವಾರಿಯಲ್ಲಿ ಬಂಡೆ ಸ್ಪೋಟಿಸಲು ಈ ಮದ್ದುಗಳನ್ನು ಇಡಲಾಗಿತ್ತು. ಆದರೆ ಮದ್ದು ಸ್ಪೋಟಿಸದ ಕಾರಣ ಪರಿಶೀಲಿಸಿ ನಿಷ್ಕ್ರಿಯಗೊಳಿಸಲು ಹೋದಾಗ ಏಕಾಏಕಿ ಸ್ಫೋಟಗೊಂಡಿದೆ. ಈ ವೇಳೆ ಮಂಜುನಾಥ್ ಹಾಗೂ ಕೋಟಪ್ಪ ಎಂಬುವರಿಗೆ ಗಂಭೀರ ಗಾಯಗಳಾಗಿದ್ದು, ಮಧುಗಿರಿ ಸಾರ್ವಜನಿಕ ಆಸ್ಪತ್ರೆಗೆ ಚಿಕಿತ್ಸೆಗಾಗಿ ರವಾನೆ ಮಾಡಲಾಗಿತ್ತು.

ಆದರೆ ಹೆಚ್ಚಿನ ಚಿಕಿತ್ಸೆ ಅಗತ್ಯ ಇರುವ ಹಿನ್ನೆಲೆ ಗಾಯಾಳುಗಳನ್ನು ತುಮಕೂರು ಜಿಲ್ಲಾಸ್ಪತ್ರೆಗೆ ಸ್ಥಳಾಂತರಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆ ಸಂಬಂಧ ಮಧುಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

LEAVE A REPLY

Please enter your comment!
Please enter your name here