ದಸರಾ ಆನೆಗಳ ನಡುವೆ ಗುದ್ದಾಟ: ಗಾಬರಿಯಿಂದ ಓಡಿದ ಜನ!

0
Spread the love

ಮೈಸೂರು:– ಮೈಸೂರಿನ ಅರಮನೆ ಆವರಣದಲ್ಲಿ ಆನೆಗಳ ನಡುವೆ ಕಿತ್ತಾಟ ನಡೆದಿದೆ. ದಸರಾ ಗಜಪಡೆಯ ಆನೆ ಧನಂಜಯ ಮತ್ತೊಂದು ಆನೆ ಕಂಜನ್ ಮೇಲೆ ಏಕಾಏಕಿ ದಾಳಿ ಮಾಡಿರುವ ಘಟನೆ ಜರುಗಿದೆ.

Advertisement

ದಾಳಿಗೆ ತತ್ತರಿಸಿದ ಕಂಜನ್‌ ಆನೆ ದಿಕ್ಕೆ ಕಾಣದಂತೆ ಅರಮನೆ ಆವರಣದಿಂದ ಹೊರ ಓಡಿದ್ದಾನೆ. ಕಂಜನ್ ಕಾಲಿಗೆ ಕಟ್ಟಿದ್ದ ಸರಪಳಿಯನ್ನು ಬಿಡಿಸಿಕೊಂಡು ಅರಮನೆಯಾಚೆಗೆ ಬಂದಿರುವ ಹಾಗೂ ಅವನನ್ನು ಹಿಡಿದು ತರಲು ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಮಾವುತರು ಹರಸಾಹಸ ಪಡುತ್ತಿರುವ ದೃಶ್ಯಗಳೂ ಸೆರೆಯಾಗಿವೆ.

‘ಮಹೇಂದ್ರ’ ಆನೆಯು ಕಂಜನ್‌ನನ್ನು ನಿಯಂತ್ರಿಸಲು ಹಿಂದಿನಿಂದ ಓಡಿತು. ಜನರು ಆನೆ ಓಡಿಬರುವುದನ್ನು ನೋಡಿ ದಿಕ್ಕಾಪಾಲಾಗಿ ಓಡಿದರು. ದೊಡ್ಡಕೆರೆ ಮೈದಾನದ ಬೆಂಗಳೂರು- ನೀಲಗಿರಿ ರಸ್ತೆಯಲ್ಲಿನ ವಾಹನಗಳನ್ನು ನೋಡುತ್ತಿದ್ದಂತೆ ಕಂಜನ್ ಬೆದರಿ ನಿಂತನು. ಮಾವುತರು ಕಾವಾಡಿಗರು ಸಮಾಧಾನ ಪಡಿಸಿದರು. ಯಾವುದೇ ಅನಾಹುತ ಸಂಭವಿಸಿಲ್ಲ. ಘಟನೆಯು ರಾತ್ರಿ 8ರ ಸುಮಾರು ನಡೆದಿದೆ ಎಂದು ಹೇಳಲಾಗಿದೆ.


Spread the love

LEAVE A REPLY

Please enter your comment!
Please enter your name here