ಇಡಿ ದಾಳಿ ಪ್ರಕರಣ: ನನ್ನ ಮನೆಯಲ್ಲಿ ಒಂದು ತುಂಡು ಸೀಜ್‌ ಆಗಿಲ್ಲ ಎಂದ ನಾರಾ ಭರತ್‌ ರೆಡ್ಡಿ!

0
Spread the love

ಬಳ್ಳಾರಿ:- ವಾಲ್ಮೀಕಿ ಹಗರಣಕ್ಕೆ ಸಂಬಂಧಿಸಿದಂತೆ ಇಂದು ಬೆಳ್ಳಂ ಬೆಳಗ್ಗೆ ಕಾಂಗ್ರೆಸ್ ಸಂಸದ, ಶಾಸಕರ ಮನೆ ಮೇಲೆ ಇಡಿ ದಾಳಿ ನಡೆಸಿತ್ತು. ಅದರಂತೆ ನಾರಾ ಭರತ್‌ ರೆಡ್ಡಿ ಅವರ ಮನೆ ಮೇಲೂ ಸತತ 14 ಗಂಟೆಗಳ ಕಾಲ ವಿಚಾರಣೆ ನಡೆಸಿದ ಇಡಿ ಅಧಿಕಾರಿಗಳು ಮಹತ್ವದ ದಾಖಲೆಗಳನ್ನ ಎರಡು ಬ್ಯಾಗ್‌ನಲ್ಲಿ ಸಂಗ್ರಹಿಸಿ ತೆಗೆದುಕೊಂಡು ಹೋಗಿದ್ದಾರೆ.

Advertisement

ಇಡಿ ವಿಚಾರಣೆ ಅಂತ್ಯದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ನಾರಾ ಭರತ್‌ ರೆಡ್ಡಿ, ನನ್ನ ಮನೆಯಲ್ಲಿ ಒಂದು ತುಂಡನ್ನೂ ಸೀಜ್‌ ಮಾಡಿಲ್ಲ. ಇಡಿ ಅಧಿಕಾರಿಗಳು ಹಲವಾರು ಪ್ರಶ್ನೆಗಳನ್ನು ಕೇಳಿದ್ದರು. ನಮ್ಮ ವ್ಯವಹಾರ, ವಾಲ್ಮೀಕಿ ನಿಗಮದ ಬಗ್ಗೆ ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ್ದೇನೆ ಎಂದು ತಿಳಿಸಿದರು.

ವಿಚಾರಣೆ ಸಂದರ್ಭದಲ್ಲಿ ಅಧಿಕಾರಿಗಳಿಗೆ ಸಹಕಾರ ಕೊಟ್ಟಿದ್ದೇನೆ. ಪಂಚನಾಮೆ ಮಾಡಿದ್ದು ಅದರಲ್ಲಿ ಸ್ಪಷ್ಟವಾಗಿ ಏನನ್ನೂ ವಶಪಡಿಸಿಕೊಂಡಿಲ್ಲ ಎಂದು ತಿಳಿಸಿದ್ದಾರೆ. 40 ಕೋಟಿ ರೂ., 50 ಕೋಟಿ ರೂ. ಜಪ್ತಿಯಾಗಿದೆ ಎಂದು ಹರಿದಾಡುತ್ತಿದೆ. ಇದೆಲ್ಲ ಸುಳ್ಳು ಮಾಹಿತಿ ಎಂದು ಹೇಳಿದರು. ರಾಜಕೀಯ ಅಂದರೆ ವಿರೋಧ ಪಕ್ಷಗಳು ಷಡ್ಯಂತ್ರ ಮಾಡುತ್ತಿವೆ. ಆದರೆ ಯಾರು ಏನೇ ಮಾಡಿದರೂ ನಮ್ಮನ್ನು ಏನು ಮಾಡಲು ಸಾಧ್ಯವಿಲ್ಲ. ಜನರ ಪ್ರೀತಿಯಿಂದ ಗೆದ್ದಿದ್ದೇನೆ. ಕಾಂಗ್ರೆಸ್ ನಾಯಕರನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎನ್ನುವುದು ಇಡೀ ದೇಶಕ್ಕೆ ಗೊತ್ತಿದೆ ಎಂದು ತಿಳಿಸಿದರು.


Spread the love

LEAVE A REPLY

Please enter your comment!
Please enter your name here