ಬೆಂಗಳೂರು: ಮುಡಾ ಹಗರಣ ಮಹತ್ತರ ತಿರುವು ಪಡೆದುಕೊಂಡಿದೆ ಅಂತ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಇಡಿ 300 ಕೋಟಿ ಮೌಲ್ಯದ ಸ್ಥಿರಾಸ್ತಿ ಮುಟ್ಟುಗೋಲು ಹಾಕಿಕೊಂಡಿದೆ. ಇದರರ್ಥ ಸಿಎಂ ಅವರು ಕುಟುಂಬಕ್ಕೆ14 ಸೈಟು ಪಡೆದುಕೊಂಡಿದ್ದಾರೆ, ಮುಡಾಗೆ ಕೋಟಿ ಕೋಟಿ ನಷ್ಟ ಆಗಿದೆ ಅಕ್ರಮವಾಗಿ ಮುಡಾ ನಿವೇಶನಗಳನ್ನು ಹಂಚಿಕೆ ಮಾಡಲಾಗಿದೆ, ಇದರಿಂದಲೂ ಭಾರೀ ನಷ್ಟ ಆಗಿದೆ ಅಂತ ಹೇಳಿದರು.
ಸ್ನೇಹಮಯಿ ಕೃಷ್ಣಾಗೆ ಅಭಿನಂದನೆ
ಆರ್ ಟಿ ಐ ಕಾರ್ಯಕರ್ತ ಹಾಗು ಮೂಡ ಅಕ್ರಮದ ವಿರುದ್ದ ಹೋರಾಟ ಮಾಡುತ್ತಿರುವ ಸ್ನೇಹಮಹಿ ಕೃಷ್ಣ ಅವರಿಗೆ ಅಭಿನಂದನೆ ಸಲ್ಲಿಸಿದ ವಿಜಯೇಂದ್ರ ಅವರು ಸ್ನೇಹಮಯಿ ಕೃಷ್ಣಾ ಅವರ ಮೇಲೆಯೇ ಸರ್ಕಾರ ಆರೋಪ ಮಾಡಿ ಅವರನ್ನು ಬಂಧಿಸಲು ಹೋಗಿತ್ತು ಇಡಿ ಮುಟ್ಟುಗೋಲು ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ಆರೋಪಿ ಸ್ಥಾನದಲ್ಲಿ ಮತ್ತೆ ನಿಲ್ಲುವಂತಾಗಿದೆ ತತಕ್ಷಣ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ ಅಂತ ಹೇಳಿದರು
ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಆಕ್ರೋಶ
ಬಿಜೆಪಿಯವ್ರು ಅನುದಾನ ವಾಪಸ್ ಕೊಡಲಿ ಎಂಬ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದರು . ರಾಜ್ಯ ಸರ್ಕಾರ ನಮಗೇನು ಉಪಕಾರ ಮಾಡ್ತಿದ್ದಾರಾ? ಅಂತ ಪ್ರಶ್ನೆ ಮಾಡಿದ ಅವರು
ಸರ್ಕಾರ ಬಂದು ಎರಡು ವರ್ಷ ಆದರೂ ಅನುದಾನ ಇಲ್ಲ. ಶಾಸಕರು ಹತಾಷರಾಗಿದ್ದಾರೆ? ಎರಡು ವರ್ಷ ಆದರೂ ಅನುದಾನ ಕೊಟ್ಟಿಲ್ಲ ಇವರ ಯೋಗ್ಯತೆಗೆ ಯಾವ ರೀತಿ ಸರ್ಕಾರ ನಡೆಸ್ತಿದ್ದಾರೆ ನಮಗೇನು ಅನುದಾನ ಕೊಟ್ಟು ಉಪಕಾರ ಮಾಡ್ತಿದ್ದಾರಾ? ಕ್ಷೇತ್ರಗಳಿಗೆ ಹಣ ಕೊಡೋದು ಕರ್ತವ್ಯ, ಉಪಕಾರ ಅಲ್ಲ ಅನುದಾನವನ್ನು ತಕ್ಷಣ ಬಿಡುಗಡೆ ಮಾಡಲಿ ಅಂತ ಹೇಳಿದರು