ಈದ್ ಕಿಟ್ ವಿತರಣೆ ಸ್ವಾಗತಾರ್ಹ: ನಾಗರಕಟ್ಟಿ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ಮುಸ್ಲಿಂ ಸಮುದಾಯದ ಪವಿತ್ರ ಹಬ್ಬವಾದ ರಂಜಾನ್ ನಿಮಿತ್ತ ಬಡ ಮುಸ್ಲಿಂ ಕುಟುಂಬಗಳಿಗೆ ಪ್ರಧಾನಿ ನರೇಂದ್ರ ಮೋದಿಯವರು ‘ನರೇಂದ್ ಕೊಡುಗೆ’ ಎಂಬ ಅಭಿಯಾನದ ಅಡಿಯಲ್ಲಿ ಈದ್ ಕಿಟ್ ವಿತರಿಸುತ್ತಿರುವುದು ಸ್ವಾಗತರ್ಹವಾಗಿದೆ ಎಂದು ಅಖಿಲ ಕರ್ನಾಟಕ ಮುಸ್ಲಿಂ ಮಹಾಸಭಾ ರಾಜ್ಯಾಧ್ಯಕ್ಷ ಮಹ್ಮದಶಫಿ ಎಸ್.ನಾಗರಕಟ್ಟಿ ಹೇಳಿದರು.

Advertisement

ನಗರದ ಮುಸ್ಲಿಂ ಮಹಾಸಭಾ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಂ ಬಡ ಕುಟುಂಬಗಳಿಗೆ ಪವಿತ್ರ ರಂಜಾನ್ ಹಬ್ಬದ ಅಂಗವಾಗಿ ಈದ್ ಕಿಟ್ ವಿತರಿಸುತ್ತಿರುವುದು ಸಂತಸದ ವಿಷಯವಾಗಿದೆ. ಆರ್ಥಿಕವಾಗಿ ದುರ್ಬಲವಾಗಿರುವ ಮುಸ್ಲಿಂ ಬಡ ಕುಟುಂಬಗಳೂ ಯಾವುದೇ ತೊಂದರೆ ಇಲ್ಲದೆ ರಂಜಾನ್ ಹಬ್ಬವನ್ನು ಆಚರಿಸಬೇಕೆಂಬ ಉದ್ದೇಶದಿಂದ ಈ ಅಭಿಯಾನವನ್ನು ಹಮ್ಮಿಕೊಂಡಿರುವುದು ಶ್ಲಾಘನೀಯ. ಅಂತೆಯೇ ರಾಜ್ಯದಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ಸರ್ಕಾರಿ ಗುತ್ತಿಗೆಯಲ್ಲಿ ಶೇ.4ರಷ್ಟು ಮೀಸಲಾತಿ ನೀಡಿರುವುದು ಸ್ವಾಗತಾರ್ಹವಾಗಿದೆ ಎಂದರು.

ಈ ಸಂದರ್ಭದಲ್ಲಿ ಗದಗ ಜಿಲ್ಲಾ ಅಧ್ಯಕ್ಷರಾದ ಎಂ.ಡಿ. ಜಾಫರ್ ಡಾಲಾಯತ್, ಜಿಲ್ಲಾ ಕಾರ್ಯದರ್ಶಿ ರಹೀಂಸಾಬ್ ದೊಡ್ಡಮನಿ, ಜಿಲ್ಲಾ ಯುವ ಘಟಕದ ಅಧ್ಯಕ್ಷ ಯಾಸಿನ್ ಮುಲ್ಲಾ, ಉಪಾಧ್ಯಕ್ಷ ಆಫ್ಜಲ್ ಮನಿಯಾರ್, ತಾಲೂಕಾಧ್ಯಕ್ಷ ಯೂನಿಸ್ ಮುಲ್ಲಾದರವೇಸ್ ಮುಂತಾದವರು ಉಪಸ್ಥಿತರಿದ್ದರು.


Spread the love

LEAVE A REPLY

Please enter your comment!
Please enter your name here