ಬೆಂಗಳೂರು: ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಿಗೆ ನಾಳೆ, ಆಗಸ್ಟ್ 25ರಂದು ಸಾರ್ವತ್ರಿಕ ರಜೆ ಘೋಷಿಸಲಾಗಿದೆ.
ರಾಜ್ಯದಾದ್ಯಂತ ಆಗಸ್ಟ್ 26ರಂದು ಈದ್ ಮಿಲಾದ್ ರಜೆ ಇದ್ದರೂ, ಈ ಎರಡು ಕರಾವಳಿ ಜಿಲ್ಲೆಗಳಿಗೆ ಮಾತ್ರ ಒಂದು ದಿನ ಮುಂಚಿತವಾಗಿ ರಜೆ ನೀಡಲಾಗಿದೆ.
ಸ್ಥಳೀಯ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಈದ್ ಮಿಲಾದ್ ರಜೆಯನ್ನು ಆಗಸ್ಟ್ 26ರ ಬದಲಿಗೆ ಆಗಸ್ಟ್ 25ರಂದು ನೀಡುವಂತೆ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಸರ್ಕಾರಕ್ಕೆ ಮನವಿ ಮಾಡಿದ್ದರು.
ಜಿಲ್ಲಾಧಿಕಾರಿಗಳ ಮನವಿಯನ್ನು ಪರಿಗಣಿಸಿದ ರಾಜ್ಯ ಸರ್ಕಾರ, ಆಗಸ್ಟ್ 25ರಂದು ಎರಡೂ ಜಿಲ್ಲೆಗಳಲ್ಲಿ ಸಾರ್ವತ್ರಿಕ ರಜೆ ನೀಡುವಂತೆ ಆದೇಶಿಸಿದೆ. ಈ ಕುರಿತು ಸರ್ಕಾರದ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದೆ.
ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಆ.26ಕ್ಕೆ ರಜೆ:
ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳನ್ನು ಹೊರತುಪಡಿಸಿ ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಈದ್ ಮಿಲಾದ್ ಪ್ರಯುಕ್ತ ಆಗಸ್ಟ್ 26ರಂದು ಸಾರ್ವತ್ರಿಕ ರಜೆ ಮುಂದುವರಿಯಲಿದೆ.
ಹೀಗಾಗಿ ಕರಾವಳಿಯ ಈ ಎರಡು ಜಿಲ್ಲೆಗಳ ಜನರಿಗೆ ನಾಳೆಯೇ ರಜೆ, ರಾಜ್ಯದ ಉಳಿದ ಭಾಗದವರಿಗೆ ಆಗಸ್ಟ್ 26ರಂದು ರಜೆ ಇರಲಿದೆ.



