ದಾವಣಗೆರೆ: ರಸ್ತೆ ದಾಟುವಾಗ ವೃದ್ದನಿಗೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದಾವಣಗೆರೆ ಹೊರ ವಲಯದ ಕಲ್ಪನಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ನಡೆದಿದೆ.
Advertisement
ಶೇಷಣ್ಣ (60) ಅಪಘಾತದಲ್ಲಿ ಸಾವನ್ನಪ್ಪಿದ ವೃದ್ದನಾಗಿದ್ದು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವಿರುದ್ಧ ಗ್ರಾಮಸ್ಥರು ಅಕ್ರೋಶ ಹೊರ ಹಾಕಿದ್ದಾರೆ. ಈ ಹಿಂದೆಯೇ ಜನರು ಓಡಾಡಲು ವಾಕಿಂಗ್ ಪಾತ್ ಇಲ್ಲ ಅಂಡರ್ ಬ್ರಿಡ್ಜ್ ಮಾಡುವಂತೆ ಮನವಿ ಮಾಡಿಕೊಂಡಿದ್ದರು. ಆದರೂ ಕೂಡ ಮನವಿ ಸ್ವೀಕರಿಸದೆ ಹೆದ್ದಾರಿ ಪ್ರಾಧಿಕಾರದವರು ನಿರ್ಲಕ್ಷ್ಯ ವಹಿಸಿದ್ದರು.
ಇದೀಗ ಈ ದುರ್ಘಟನೆ ಸಂಭವಿಸಿದೆ. ಇದರಿಂದಾಗಿ ರೊಚ್ಚಿಗೆದ್ದ ಗ್ರಾಮಸ್ಥರು ಹೆದ್ದಾರಿ ಪ್ರಾಧಿಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳು ಸಾಲು ಸಾಲಾಗಿ ಕಿಲೋಮೀಟರ್ ಗಟ್ಟಲೆ ನಿಂತಿದ್ದವು. ಇದರಿಂದ ಗ್ರಾಮಸ್ಥರನ್ನು ಮನವೊಲಿಸಲು ಪೊಲೀಸರು ಹರಸಾಹಸ ಪಟ್ಟರು.