ಬೆಂಗಳೂರಿನಲ್ಲಿ ವೃದ್ಧೆ ಮರ್ಡರ್ ಕೇಸ್: ಚಿನ್ನ ಕದ್ದೊಯ್ದಿದ್ದ ಖತರ್ನಾಕ್ ದಂಪತಿ ಅರೆಸ್ಟ್!

0
Spread the love

ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ವೃದ್ದೆ ಕೊಲೆ ಮಾಡಿ ಚಿನ್ನಾಭರಣ ದೋಚಿ ಎಸ್ಕೇಪ್ ಆಗಿದ್ದ ಆರೋಪಿಗಳನ್ನು ಸುಬ್ರಮಣ್ಯಪುರ ಪೋಲೀಸರು ಅರೆಸ್ಟ್ ಮಾಡಿದ್ದಾರೆ.

Advertisement

ಮಹಾರಾಷ್ಟ್ರ ಮೂಲದವರಾದ ಪ್ರಸಾದ್ ಶ್ರೀಶೈಲ(26), ಸಾಕ್ಷಿ (23) ಹಣಮಂತ್ ಹೊದ್ಲೂರು ಬಂಧಿತರು. ಮಂಗಳವಾರ ಉತ್ತರಹಳ್ಳಿ ಮನೆಯಲ್ಲಿ ಕೊಲೆ ನಡೆದಿತ್ತು. ಆರೋಪಿ ಪ್ರಸಾದ್ ಸೆಂಟ್ರಿಂಗ್ ಕೆಲಸ ಮಾಡ್ತಿದ್ದ. ಆರೋಪಿತೆ ಸಾಕ್ಷಿ ಚಿನ್ನದ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದಳು. ಆರೋಪಿಗಳು ಕೊಲೆ ಮಾಡಿ ತಮಗೆ ಏನು ಗೊತ್ತಿಲ್ಲದಂತೆ ನಾಟಕ ಆಡಿದ್ದರು.

ಸದ್ಯ ಇದೀಗ ಇಬ್ಬರನ್ನು ಬಂಧಿಸಿರುವ ಪೋಲೀಸರು ಹೆಚ್ಚಿನ ವಿಚಾರಣೆ ಕೈಗೊಂಡಿದ್ದಾರೆ.


Spread the love

LEAVE A REPLY

Please enter your comment!
Please enter your name here