ವಿಜಯಸಾಕ್ಷಿ ಸುದ್ದಿ, ಡಂಬಳ: ಮುಂಡರಗಿ ತಾಲೂಕಾ ಕಾರ್ಯನಿರತ ಪತ್ರಕರ್ತರ ಸಂಘದ 2025-28ನೇ ಸಾಲಿನ ಅವಧಿಗೆ ನಡೆದ ಚುನಾವಣೆಯಲ್ಲಿ ನೂತನ ಪದಾಧಿಕಾರಿಗಳನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.
ಅಧ್ಯಕ್ಷರಾಗಿ ಶಿವಮೂರ್ತಿ ಹೊಂಬಳಗಟ್ಟಿ, ಉಪಾಧ್ಯಕ್ಷರಾಗಿ ಲಕ್ಷ್ಮಣ ಎಚ್.ದೊಡ್ಡಮನಿ, ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನಗೌಡ ಪಾಟೀಲ, ಕಾರ್ಯದರ್ಶಿಯಾಗಿ ವಿಜಯಕುಮಾರ ಸೊರಟೂರ, ಖಜಾಂಚಿಯಾಗಿ ಮಂಜುನಾಥ ಜಾಗಟಗೇರಿ ಆಯ್ಕೆಯಾಗಿದ್ದಾರೆ.
ತಾಲೂಕು ಕಾರ್ಯಕಾರಿಣಿ ಸದಸ್ಯರ ಮೂರು ಸ್ಥಾನಕ್ಕೆ ಕಾಶಿನಾಥ ಬಿಳಿಮಗ್ಗದ, ಸಿ.ಕೆ. ಗಣಪ್ಪನವರ, ಕವಿ ಬಂಕಾಪೂರ ಆಯ್ಕೆಯಾಗಿದ್ದಾರೆ. ಚುನಾವಣಾ ಅಧಿಕಾರಿಯಾಗಿ ಜಿಲ್ಲಾ ಖಜಾಂಚಿ ರಾಮಣ್ಣ ವಗ್ಗಿ, ಸಹಾಯಕ ಚುನಾವಣಾ ಅಧಿಕಾರಿಯಾಗಿ ಜಿಲ್ಲಾ ಕಾರ್ಯಕಾರಿಣಿ ಸಮಿತಿ ಸದಸ್ಯ ವೆಂಕಟೇಶ ಇಮರಾಪೂರ, ಸಂತೋಷ ಕೊಣ್ಣೂರ ಕಾರ್ಯನಿರ್ವಹಿಸಿದರು.



