ಚುನಾವಣಾ ಬಾಂಡ್‌ ಅಕ್ರಮ: ನಿರ್ಮಲಾ ಸೀತಾರಾಮನ್‌, ಕಟೀಲ್ʼಗೆ ರಿಲೀಫ್ ನೀಡಿದ ಹೈಕೋರ್ಟ್

0
Spread the love

ಬೆಂಗಳೂರು: ಚುನಾವಣಾ ಬಾಂಡ್ ಹೆಸರಿನಲ್ಲಿ ಸುಲಿಗೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಬಿಜೆಪಿ ಸಂಸದ ನಳೀನ್ ಕುಮಾರ್ ಕಟೀಲ್​ ಹಾಗೂ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಹೈಕೋರ್ಟ್ ಬಿಗ್​ ರಿಲೀಫ್  ನೀಡಿದೆ. ಚುನಾವಣಾ ಬಾಂಡ್ ಹೆಸರಿನಲ್ಲಿ ಸುಲಿಗೆ ಮಾಡಲಾಗಿದೆ ಎಂದು ಆರೋಪಿಸಿ ಆದರ್ಶ ಅಯ್ಯರ್ ಅವರು ಬೆಂಗಳೂರಿನ ತಿಲಕ್​ ನಗರ ಠಾಣೆಗೆ ದೂರು ದಾಖಲಿಸಿದ್ದರು. ಇದರ ಬೆನ್ನಲ್ಲೇ ಕಟೀಲ್​ ಪ್ರಕರಣ ರದ್ದು ಕೋರಿ ಹೈಕೋರ್ಟ್​ ಮೆಟ್ಟಿಲೇರಿದ್ದರು.

Advertisement

ಇದೀಗ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಮಾಜಿ ಸಂಸದ ನಳೀನ್ ಕುಮಾರ್ ಕಟೀಲ್​ ವಿರುದ್ಧ ದಾಖಲಾಗಿದ್ದ ಎಫ್​ಐಆರ್​ ರದ್ದುಗೊಳಿಸಿ ಹೈಕೋರ್ಟ್​ ಆದೇಶ ಹೊರಡಿಸಿದೆ. ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್ ಏಕಸದಸ್ಯ ಪೀಠ ಎಫ್​ಐಆರ್​ ರದ್ದುಪಡಿಸಿ ಆದೇಶ ಹೊರಡಿಸಿದೆ.

ನಿರ್ಮಲಾ ಸೀತಾರಾಮನ್‌ ಹಾಗೂ ಜಾರಿ ನಿರ್ದೇನಾಲಯದ ಅಧಿಕಾರಿಗಳು 2019 ರಿಂದ 2023 ರ ನವೆಂಬರ್‌ ಅವಧಿಯಲ್ಲಿ ಸಾಂವಿಧಾನಿಕ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಇವರು ಇತರೆ ಆರೋಪಿಗಳ ಜತೆ ಒಳಸಂಚು ನಡೆಸಿ ಎಂಎನ್‌ಸಿ ಹಾಗೂ ಟಿಎನ್‌ಸಿ ಕಾರ್ಪೋರೇಟ್‌ ಕಂಪೆನಿಗಳ ಸಿಇಒ ಹಾಗೂ ವ್ಯವಸ್ಥಾಪಕ ನಿರ್ದೇಶಕರನ್ನು ಹೆದರಿಸಿ ಚುನಾವಣಾ ಬಾಂಡ್‌ ಹೆಸರಿನಲ್ಲಿ 8,000 ಕೋಟಿ ರೂ.ಗಳನ್ನು ಬಲವಂತವಾಗಿ ಸುಲಿಗೆ ಮಾಡಿದ್ದಾರೆ ಎಂದು ದೂರುದಾರರು ಆರೋಪಿಸಿದ್ದರು.


Spread the love

LEAVE A REPLY

Please enter your comment!
Please enter your name here