ಕೊಪ್ಪಳ:- ಗಂಗಾವತಿಯ ಜಂಗಮರ ಕಲ್ಗುಡಿಯಲ್ಲಿ ವಿದ್ಯುತ್ ಅವಘಡದಿಂದ ಶಿಕ್ಷಕಿಯೊಬ್ಬರು ಸಾವಿಗೀಡಾದ ಘಟನೆ ಜರುಗಿದೆ.
Advertisement
34 ವರ್ಷದ ಹರಿತಾ ಮೃತ ದುರ್ದೈವಿ. ಇಂದು ಬೆಳಗ್ಗೆ ಶಾಲೆಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ರಸ್ತೆಯಲ್ಲಿ ಹೋಗುವಾಗ ತುಂಡಾಗಿದ್ದ ವಿದ್ಯುತ್ ತಂತಿ ಗಮನಿಸದೇ ತುಳಿದಿದ್ದು, ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಂಗಾವತಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.