ಮಂಡ್ಯ:- ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಪ್ಲಾಸ್ಟಿಕ್ ಗೋದಾಮು ಹೊತ್ತಿ ಉರಿದಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಕಿರುಗಾವಲು ಗ್ರಾಮದಲ್ಲಿ ಜರುಗಿದೆ.
ಮಹಮದ್ ಎಂಬುವರಿಗೆ ಸೇರಿದ ಪ್ಲಾಸ್ಟಿಕ್ ಚೀಲದ ಗೋದಾಮಿನಲ್ಲಿ ತಡರಾತ್ರಿ ಈ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಗೋದಾಮಿದಲ್ಲಿದ್ದ ಕಚ್ಚಾ ಪಾದಾರ್ಥಗಳು ಸೇರಿ ಹಲವು ವಸ್ತುಗಳು ಬೆಂಕಿಗಾಹುತಿಯಾಗಿದೆ. ಸ್ಥಳಕ್ಕೆ ಅಗ್ನಿಶಾಮಕದಳ ಸಿಬ್ಬಂದಿ ದೌಡಾಯಿಸಿ ಪರಿಶೀಲನೆ ಮಾಡಿದ್ದು, ಬೆಂಕಿ ಶಮನ ಮಾಡುವ ಕಾರ್ಯ ಮಾಡಿದ್ದಾರೆ.
ಕಿರುಗಾವಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.



