ವಿಜಯಸಾಕ್ಷಿ ಸುದ್ದಿ, ಮುಳಗುಂದ:ಪಾಲಕರು ಸರಕಾರಿ ಶಾಲೆಗೆ ಮಕ್ಕಳನ್ನು ದಾಖಲಾತಿ ಮಾಡಿಸಿ ಮಕ್ಕಳ ಭವಿಷ್ಯಕ್ಕೆ ಬುನಾದಿ ಹಾಕಬೇಕು ಎಂದು ಪ.ಪಂ ಸದಸ್ಯ ಕೆ.ಎಲ್. ಕರಿಗೌಡರ ಹೇಳಿದರು.
ಅವರು ಪಟ್ಟಣದ ಸರಕಾರಿ ಮಾದರಿ ಕನ್ನಡ ಗಂಡು ಮಕ್ಕಳ ಶಾಲೆ ನಂ.1ರಲ್ಲಿ ಶಾಲಾ ಪ್ರಾರಂಭೋತ್ಸವ ಹಾಗೂ ಮಕ್ಕಳ ದಾಖಲಾತಿ ಆಂದೊಲನದಲ್ಲಿ ಮಕ್ಕಳಿಗೆ ಗುಲಾಬಿ ಹೂ ಮತ್ತು ಸಿಹಿ ನೀಡಿ ಸ್ವಾಗತಿಸಿ ಮಾತನಾಡಿ, ಸರಕಾರಿ ಶಾಲೆಗಳಲ್ಲಿ ನುರಿತ ಅನುಭವಿ ಗುರುಬಳಗವಿದೆ ಹಾಗೂ ಸರಕಾರದಿಂದ ಹಲವಾರು ಯೋಜನೆಗಳ ಮೂಲಕ ಮಕ್ಕಳ ಶೈಕ್ಷಣಿಕ ಬೆಳವಣಿಗೆಗೆ ಸಹಕಾರಿಯಾಗಿದ್ದು, ಪಾಲಕರು ಮಕ್ಕಳನ್ನು ಸರಕಾರಿ ಶಾಲೆಗೆ ಸೇರಿಸಿ ಎಂದರು.
ಶಾಲಾ ಪ್ರಧಾನ ಗುರು ಪಿ.ಬಿ. ಕೆಂಚನಗೌಡರ, ಎಸ್ಡಿಎಂಸಿ ಅಧ್ಯಕ್ಷ ವಿ.ಡಿ. ಸಿದ್ದನಗೌಡರ, ಶಿಕ್ಷಕರಾದ ಎಂ.ಎಂ. ಮೇಗಲಮನಿ. ಕೆ.ಎಂ. ಹೆರಕಲ್, ಎಂ. ಎಂ. ಕೊಪ್ಪಳ, ಮಂಜುನಾಥ ಕಲ್ಯಾಣಮಠ, ಎಸ್.ಎಚ್. ಉಪ್ಪಾರ, ಎಚ್.ಆರ್. ಭಜೆಂತ್ರಿ, ಟಿ.ವೀಣಾ, ಎಸ್.ವಿ. ಹಿರೇಮಠ, ವಿ.ಎಂ. ಕಂಠಿ, ಎಸ್.ಡಿ. ಪಂಡಿತ, ಬಿ.ವಿ. ಸುಂಕಾಪೂರ, ಜಿ.ಎಂ. ಗಾಡಿ, ಮಂಜುನಾಥ ಗುಲಗಂಜಿ ಇದ್ದರು.