Home Gadag News ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಿ

ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಿ

0
ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಿ
Spread the love

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಸರ್ಕಾರಿ ಶಾಲೆಗಳಲ್ಲಿ ಉಚಿತ ಶಿಕ್ಷಣದೊಂದಿಗೆ ಗುಣಮಟ್ಟದ ಶಿಕ್ಷಣ ಕಲ್ಪಿಸುವ ನಿಟ್ಟಿನಲ್ಲಿ ಆಳುವ ಎಲ್ಲ ಸರ್ಕಾರಗಳು ನಿರಂತರ ಪುನಶ್ಚೇತನಗೊಳಿಸುವ ಕಾರ್ಯ ಮಾಡುತ್ತಲೇ ಬಂದಿವೆ. ಪಾಲಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಿ ಸರ್ಕಾರಿ ಶಾಲೆಗಳ ಬಲವರ್ಧನೆಗೆ ಕೈಜೋಡಿಸಬೇಕು ಎಂದು ಶಾಸಕ ಡಾ. ಚಂದ್ರು ಲಮಾಣಿ ಹೇಳಿದರು.

ಅವರು ಶುಕ್ರವಾರ ಯಲ್ಲಾಪುರ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಆವರಣದಲ್ಲಿ ವಿವೇಕ ಕೊಠಡಿ ಯೋಜನೆಯಡಿ 34.30 ಲಕ್ಷ ರೂಗಳಲ್ಲಿ 2 ಕೊಠಡಿ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.

ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಹೆಚ್ಚಳವಾಗಬೇಕು ಮತ್ತು ಶಿಕ್ಷಣದ ಗುಣಮಟ್ಟದ ಎತ್ತರಕ್ಕೇರಬೇಕಾದಲ್ಲಿ ಮೊದಲ ಆದ್ಯತೆಯಾಗಿ ಹೆಚ್ಚಿನ ಅನುದಾನ, ಸೌಲಭ್ಯಗಳನ್ನು ಕಲ್ಪಿಸುವುದು ಮುಖ್ಯವಾಗಿದೆ. ಅದಕ್ಕೆ ತಕ್ಕಂತೆ ಶಿಕ್ಷಕರು ಸಮರ್ಪಣಾ ಮನೋಭಾವದಿಂದ ಸೇವೆ ಸಲ್ಲಿಸಬೇಕು. ಪಾಲಕರೂ ಸಹ ಇಂಗ್ಲೀಷ್ ಮೀಡಿಯಂ ವ್ಯಾಮೋಹ ಬಿಟ್ಟು ಗ್ರಾಮೀಣ ಭಾಗದ ಕನ್ನಡ ಶಾಲೆಗಳನ್ನು ಉಳಿಸುವ ಕಾರ್ಯ ಮಾಡಬೇಕು ಎಂದರು.

ಈ ವೇಳೆ ದೊಡ್ಡೂರ ಗ್ರಾ.ಪಂ ಅಧ್ಯಕ್ಷ ಚಂದ್ರಶೇಖರ ಈಳಿಗೇರ, ಶಾಲಾ ಸುಧಾರಣಾ ಸಮಿತಿ ಅಧ್ಯಕ್ಷ ಮಂಜಣ್ಣ ಅಂಗಡಿ, ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ನಾಣಕಿ ನಾಯಕ, ಮಹಾಂತಗೌಡ ಭರಮಗೌಡ್ರ, ತುಕ್ಕಪ್ಪ ಪೂಜಾರ, ಸಕ್ರಪ್ಪ ಕಡೆಮನಿ, ಫಕ್ಕೀರಗೌಡ ಭರಮಗೌಡ್ರ, ಮಹಾಂತೇಶ ಹರಕುಣಿ, ಹನುಮಂತಪ್ಪ ಲಮಾಣಿ, ರಾಮಣ್ಣ ಲಮಾಣಿ, ಕಿರಣ ಲಮಾಣಿ, ಕುಮಾರ ಲಮಾಣಿ, ಮಹಾಂತೇಶ ಮತ್ತೂರು, ಶಿವಪ್ಪ ಅಕ್ಕೂರ, ಸುನೀಲ ಲಮಾಣಿ, ಡಾಕಪ್ಪ ಲಮಾಣಿ, ರವಿ ಭಜಕ್ಕನವರ, ಎಫ್.ಎಚ್. ತಿಮ್ಮಾಪುರ, ಮಹೇಶ ಅಥಣಿ, ಯು.ಜಿ. ಹುಚ್ಚಯ್ಯನಮಠ, ಫಕ್ಕೀರೇಶ ಕಟಗಿ, ಮುಖ್ಯೋಪಾಧ್ಯಾಯ ಬಿ.ಎನ್. ಗಾಯಕವಾಡ, ಶಿಕ್ಷಕರು ಇದ್ದರು.


Spread the love

LEAVE A REPLY

Please enter your comment!
Please enter your name here