ವಿಜಯಸಾಕ್ಷಿ ಸುದ್ದಿ, ಗದಗ : ನಗರದ ಗಂಗಾಪೂರ ಪೇಟೆಯಲ್ಲಿರುವ ಶ್ರೀ ದುರ್ಗಾದೇವಿ ಶಿಕ್ಷಣ ಸಮಿತಿಯಲ್ಲಿ ಬುಧವಾರ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಶಾಲೆಯ ಮುಖ್ಯೋಪಾಧ್ಯಾಯರಾದ ಎಚ್.ಎಂ. ನದಾಫ್ ಅವರು ಮಕ್ಕಳಿಗೆ ಪರಿಸರದ ಮಹತ್ವದ ಕುರಿತು ತಿಳಿ ಹೇಳಿ, ಪ್ರತಿಯೊಬ್ಬರೂ ಸಸಿ ನೆಡುವ ಮೂಲಕ ಪರಿಸರವನ್ನು ರಕ್ಷಣೆ ಮಾಡಬೇಕೆಂದು ಹೇಳಿದರು.
ಈ ಸಂದರ್ಭದಲ್ಲಿ ಸಹ ಶಿಕ್ಷಕಿಯರಾದ ಎಂ.ಎಂ. ಹಿಡ್ಕಿಮಠ, ರೇಖಾ ಅಂಗಡಿ, ವಿ.ವಿ. ಕಲ್ಮನಿ, ಜೆ.ವಿ. ಅರಸಿದ್ದಿ, ಬಿ.ಎ. ಬಳ್ಳಾರಿ ಹಾಗೂ ಸಿಬ್ಬಂದಿಗಳಾದ ಲಕ್ಷ್ಮಿ ಕಮಡೊಳ್ಳಿ, ಸೈನಾಜಬಾನು ರೋಣ ಸೇರಿದಂತೆ ಶಾಲೆಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.



