ಸೈಕಲ್ ಜಾಥಾ, ಬೀದಿ ನಾಟಕ ಪ್ರದರ್ಶನ

0
Environment Day Celebration at salumaradaThimmakka Garden
Spread the love

ವಿಜಯಸಾಕ್ಷಿ ಸುದ್ದಿ, ಗದಗ : ನಗರದ ಸಾಲುಮರದ ತಿಮ್ಮಕ್ಕ ಉದ್ಯಾನದಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಾರ್ಯಾಲಯ ಗದಗ ವಿಭಾಗದ ವತಿಯಿಂದ ‘ಅವರ್ ಲ್ಯಾಂಡ್ ಅವರ್ ಫ್ಯೂಚರ್’ ಶಿರ್ಷಿಕೆಯಡಿ ಪರಿಸರ ದಿನವನ್ನು ಆಚರಿಸಲಾಯಿತು.

Advertisement

ಪ್ರಧಾನ ಜಿಲ್ಲಾ ಮತ್ತು ಸತ್ಯ ನ್ಯಾಯಾಧೀಶ ಬಸವರಾಜ, ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ರಾಜೇಶ್ವರ ಶೆಟ್ಟಿ, ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದಶಿ ಸಿ.ಎಸ್. ಶಿವನಗೌಡ್ರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ, ಜಿಲ್ಲಾ ಪಂಚಾಯತ್ ಸಿಇಒ ಭರತ್ ಎಸ್., ಉಪ ಅರಣ್ಯ ಸಂರಕ್ಷಣಾಧಿಕಾರಿ ಲೇಖರಾಜ್ ಮೀನಾ ಅವರು ಸಸಿಗಳನ್ನು ನೆಟ್ಟು, ನೀರುಣಿಸಿದರು.

ಇದಕ್ಕೂ ಮುನ್ನ ನಗರದ ಕೆ.ಎಚ್. ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ಸೈಕಲ್ ಜಾಥಾಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ, ಜಿಲ್ಲಾ ಪಂಚಾಯತ್ ಸಿಇಒ ಭರತ್ ಎಸ್., ಉಪ ಅರಣ್ಯ ಸಂರಕ್ಷಣಾಧಿಕಾರಿ ಲೇಖರಾಜ್ ಮೀನಾ ಚಾಲನೆ ನೀಡಿದರು.

ನಗರದ ಕೆ.ಎಚ್. ಪಾಟೀಲ ಜಿಲ್ಲಾ ಕ್ರೀಡಾಂಗಣದಿಂದ ಆರಂಭವಾದ ಸೈಕಲ್ ಜಾಥಾ ಹಳೇ ಡಿಸಿ ಆಫೀಸ್ ಸರ್ಕಲ್, ಮುಳಗುಂದ ನಾಕಾ ಮಾರ್ಗವಾಗಿ ತಾಲೂಕಿನ ಬಿಂಕದಕಟ್ಟಿಯ ಸಾಲು ಮರದ ತಿಮ್ಮಕ್ಕ ಸಸ್ಯೋದ್ಯಾನವರೆಗೆ ಸಾಗಿತು.

ಮಾರ್ಗಮಧ್ಯೆ ಹಳೆ ಜಿಲ್ಲಾಧಿಕಾರಿ ಕಚೇರಿ ಹಾಗೂ ಮುಳಗುಂದ ನಾಕಾದಲ್ಲಿ ಪರಿಸರ ಜಾಗೃತಿ ಕುರಿತು ಬೀದಿ ನಾಟಕ ಪ್ರದರ್ಶನದ ಮೂಲಕ ಸಾರ್ವಜನಿಕರಿಗೆ ಪರಿಸರ ಮಹತ್ವದ ಕುರಿತು ಜಾಗೃತಿ ಮೂಡಿಸಲಾಯಿತು.

ಇದೇ ಸಂದರ್ಭದಲ್ಲಿ ಪರಿಸರ ಪ್ರೇಮಿಗಳಾದ ಲಕ್ಷ್ಮೇಶ್ವರದ ಶಂಕರ ಬ್ಯಾಡಗಿ, ನರಗುಂದದ ನಜೀರಸಾಬ್ ಜಮಾದಾರ, ರೋಣದ ಮುತ್ತಣ್ಣ ತಿರ್ಲಾಪುರ, ಗದಗ ಕಿರಣ ಅವರನ್ನು ಸನ್ಮಾನಿಸಲಾಯಿತು. ಜೊತೆಗೆ ದಿನಗೂಲಿ ನೌಕರರಾದ ಸೊರಟೂರಿನ ಆನಂದ ಮಲ್ಲಾರಿ, ನೆಲ್ಲೂರಿನ ಶಾಂತಯ್ಯ ಬೆಳವಣಕಿ, ಗದುಗಿನ ಹನುಮಂತ ಮಾಚೇನಹಳ್ಳಿ, ಬಿಡ್ನಾಳದ ಚನ್ನಪ್ಪ ಕಿರದಾಳ, ಕಡಕೋಳದ ಚನ್ನವೀರಯ್ಯ ಗೊಳಗೇರಿಮಠ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.


Spread the love

LEAVE A REPLY

Please enter your comment!
Please enter your name here