ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಮಕ್ಕಳಿಗೆ ಪಠ್ಯ ಶಿಕ್ಷಣದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿ ಅವರಲ್ಲಿನ ಪ್ರತಿಭೆ, ಕೌಶಲ್ಯ ಗುರುತಿಸಿ ವ್ಯಕ್ತಿತ್ವ ವಿಕಸನ ಮತ್ತು ನಾಯಕತ್ವ ಗುಣ ಬೆಳೆಸುವ ಮೂಲಕ ಸರ್ವತೋಮುಖ ಬೆಳವಣಿಗೆಗೆ ಪ್ರತಿಭಾ ಕಾರಂಜಿ/ಕಲೋತ್ಸವ ಕಾರ್ಯಕ್ರಮಗಳು ಸೂಕ್ತ ವೇದಿಕೆಯಾಗಿವೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ನಾಣಕೀ ನಾಯಕ್ ಅಭಿಪ್ರಾಯಪಟ್ಟರು.
ಅವರು ಪಟ್ಟಣದ ಲಿಟಲ್ ಹಾರ್ಟ್ಸ್ ಇಂಟರ್ನ್ಯಾಷನಲ್ ಸ್ಕೂಲ್ನಲ್ಲಿ ಮಂಗಳವಾರ ಹಮ್ಮಿಕೊಳ್ಳಲಾಗಿದ್ದ ಲಕ್ಷ್ಮೇಶ್ವರ ದಕ್ಷಿಣ ಮತ್ತು ಉರ್ದು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಸ್ಪರ್ಧಾ ಕಾರ್ಯಕ್ರಮಗಳನ್ನು ಉದ್ಘಾಟಿಸಿ ಮಾತನಾಡಿದರು.
ಪ್ರತಿಭೆ ಎನ್ನುವುದು ಕೇವಲ ಪಠ್ಯಕ್ಕೆ ಸೀಮಿತವಾಗಿರುವುದಿಲ್ಲ. ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳಿಗೆ ಇಲಾಖೆ ಸಮಾನ ಆದ್ಯತೆ ನೀಡುತ್ತಿದೆ ಎಂದು ಹೇಳಿದರು.
ಮುಖ್ಯ ಅತಿಥಿಗಳಾಗಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಿ.ಎಸ್. ಹರ್ಲಾಪುರ, ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಆನಂದ ಮುಳಗುಂದ, ಎಸ್.ಕೆ. ಹವಾಲ್ದಾರ, ಎಸ್.ಎಚ್. ಪೂಜಾರ, ಎಸ್.ಡಿ. ಲಮಾಣಿ, ಎ.ಎಮ್. ಅಕ್ಕಿ, ಎಮ್.ಎ. ನದಾಫ್, ಜೆ.ವಿ. ಅರಳಿಕಟ್ಟಿ, ಬಿ.ಆರ್.ಪಿ ಬಿ.ಎಮ್. ಯರಗುಪ್ಪಿ, ಶಾಲಾ ಮುಖ್ಯ ಶಿಕ್ಷಕರಾದ ಗಂಗಾಧರ ಶಿರಹಟ್ಟಿ, ಪ್ರಧಾನ ಗುರುಗಳಾದ ಬಸವರಾಜ ಕುಂಬಾರ, ಬಿ.ಎಚ್. ನಡುವಿಮನಿ, ಗುರು ನಾಯಕ, ಸಿ.ಆರ್. ಪಿಗಳಾದ ಎನ್.ಎ. ಮುಲ್ಲಾ, ಸಿ.ವಿ. ವಡಕಣ್ಣವರ, ಗಿರೀಶ ನೇಕಾರ, ನವೀನ ಅಂಗಡಿ, ಸತೀಶ್ ಬೊಮಲೆ, ಎನ್.ಎನ್. ಶಿಗ್ಲಿ, ಎಚ್.ಡಿ. ನಿಂಗರಡ್ಡಿ, ಗಿರೀಶ ಸುಗಜಾನವರ, ಜಿ.ಎನ್. ಶಿರನಹಳ್ಳಿ, ಎಲ್.ಆರ್. ಮಲಸಮುದ್ರ, ಎಚ್. ಪ್ರೇಮಾ, ಪಿ.ಎಮ್. ಸಾಂಗ್ಲಿಕರ, ಎನ್.ಎಸ್. ಬಂಕಾಪುರ ಮುಂತಾದವರಿದ್ದರು.
ಬಿಆರ್ಪಿ ಈಶ್ವರ ಮೇಡ್ಲೇರಿ ಪ್ರಾಸ್ತಾವಿಕವಾಗಿ ಮಾತನಾಡಿದರು, ಸಿ.ಆರ್.ಪಿ ಉಮೇಶ ನೇಕಾರ ಸ್ವಾಗತಿಸಿದರು. ಸುವರ್ಣ ಹಡಗಲಿ ಕಾರ್ಯಕ್ರಮ ನಿರೂಪಿಸಿದರು. ಶ್ರೀನಿವಾಸ ಮತ್ತೂರ ವಂದಿಸಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಲಿಟಲ್ ಹಾರ್ಟ್ಸ್ ಶಾಲೆಯ ಅಧ್ಯಕ್ಷ ರಾಮೇಶ್ವರ ಶಿರಹಟ್ಟಿ, ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವದಂತಹ ಸ್ಪರ್ಧೆಗಳು ಮಕ್ಕಳಲ್ಲಿ ಆತ್ಮವಿಶ್ವಾಸ ಮೂಡಿಸುತ್ತವೆ. ಇಂತಹ ಕಾರ್ಯಕ್ರಮಗಳಲ್ಲಿ ಉತ್ತಮ ಪ್ರದರ್ಶನ ತೋರಿದ ವಿದ್ಯಾರ್ಥಿಗಳಿಗೆ ಇಂದು ಸಾಮಾಜಿಕ ಮಾಧ್ಯಮಗಳ ಮೂಲಕ ಉತ್ತಮ ಅವಕಾಶ ಹಾಗೂ ಗುರುತಿಸುವಿಕೆ ಸಿಗುತ್ತಿರುವುದು ಒಳ್ಳೆಯ ಬೆಳವಣಿಗೆ ಎಂದರು.



