ಚಿಕ್ಕ ಗುಮಾಸ್ತನಾಗಲಿ ಗೌರವದಿಂದ ಕಾಣಬೇಕು: ರವಿಕುಮಾರ್ ಹೇಳಿಕೆ ಖಂಡಿಸಿದ ಸುರೇಶ್ ಗೌಡ

0
Spread the love

ಬೆಂಗಳೂರು: ರವಿಕುಮಾರ್ ಮಾತನಾಡಿದ್ದು ಸರಿಯಲ್ಲ. ಚಿಕ್ಕ ಗುಮಾಸ್ತನಾಗಲಿ ಗೌರವದಿಂದ ಕಾಣಬೇಕು ಎಂದು ಶಾಸಕ ಬಿ.ಸುರೇಶ್‌ ಗೌಡ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ರವಿಕುಮಾರ್ ಮಾತನಾಡಿದ್ದು ಸರಿಯಲ್ಲ.

Advertisement

ಚಿಕ್ಕ ಗುಮಾಸ್ತನಾಗಲಿ ಗೌರವದಿಂದ ಕಾಣಬೇಕು. ಕೋಪದಲ್ಲಿ ಮಾತನಾಡಿ ಗೊಂದಲ ಮಾಡಿಕೊಳ್ಳಬಾರದು. ರವಿಕುಮಾರ್ ಮಾತನಾಡಿದರೆ ಅವರೇ ಸ್ಪಷ್ಟನೆ ಕೊಡಬೇಕು. ಅದನ್ನ ಬಿಜೆಪಿ ಹೇಳಿಕೊಟ್ಟು ಮಾತನಾಡಿಸಿದ್ದಲ್ಲ. ರವಿಕುಮಾರ್ ಹೇಳಿಕೆಯನ್ನ ಖಂಡಿಸುತ್ತೇನೆ ಎಂದಿದ್ದಾರೆ.

ಇನ್ನೂ ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಸಿದ್ದರಾಮಯ್ಯ ಡಿವೈಎಸ್‍ಪಿ ಮೇಲೆ ಕಪಾಳ ಮೋಕ್ಷ ಮಾಡಲು ಹೋಗಿದ್ದರು. ವೇದಿಕೆಯಲ್ಲಿ ಸ್ವಾಮೀಜಿ ಪಕ್ಕ ಕುಳಿತಿದ್ದ ಐಎಎಸ್ ಅಧಿಕಾರಿಯನ್ನ ಹೊರಗೆ ಕಳುಹಿಸಿದ್ರು ಎಂದು ಸಿಎಂ ವಿರುದ್ಧವು ಅಸಮಾಧಾನ ಹೊರಹಾಕಿದ್ದಾರೆ.

 


Spread the love

LEAVE A REPLY

Please enter your comment!
Please enter your name here