ಬೆಂಗಳೂರು: ಅಗತ್ಯ ಬಿದ್ದರೆ ಕುಮಾರಸ್ವಾಮಿ ಅವರನ್ನ ಬಂಧನ ಮಾಡುತ್ತೇವೆ ಎಂಬ ಸಿಎಂ ಹೇಳಿಕೆಗೆ ಕೇಂದ್ರ ಸಚಿವ ಕುಮಾರಸ್ವಾಮಿ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.
Advertisement
ನನ್ನ ಬಂಧನ ಮಾಡೋಕೆ ನೂರು ಜನ ಸಿದ್ದರಾಮಯ್ಯ ಬಂದರೂ ಆಗೊಲ್ಲ. ನನಗೆ ಭಯ ಶುರುವಾಗಿದೆ ಅಂತ ಸಿಎಂ ಹೇಳ್ತಾರೆ. ನನಗೆ ಭಯ ಶುರುವಾಗಿದೆಯಾ? ನನ್ನನ್ನ ನೋಡಿದ್ರೆ ಹಾಗೆ ಅನ್ನಿಸುತ್ತಾ ಅಂತ ಪ್ರಶ್ನೆ ಮಾಡಿದ್ರು.
ಸಿದ್ದರಾಮಯ್ಯ ಅವರು ಒಂದು ವಾರದಿಂದ ಹೇಗೆ ನಡೆದುಕೊಂಡಿದ್ದಾರೆ ಅಂತ ಜನ ನೋಡಿದ್ದಾರೆ. ಮೈಸೂರಿನ ದಾಖಲೆಗಳೇ ಇವೆಯಲ್ಲ. ಮುಡಾ ಆಸ್ತಿ ನನ್ನ ಆಸ್ತಿ ಅಂತ ಹೇಳ್ತಿದ್ದಾರೆ. ಇಂತಹ ಭಂಡತನ ಮುಖ್ಯಮಂತ್ರಿ ನಾನು ನೋಡಿಲ್ಲ ಅಂತ ಸಿದ್ದರಾಮಯ್ಯ ವಿರುದ್ದ ವಾಗ್ದಾಳಿ ನಡೆಸಿದರು.