ಆಡಳಿತ ಪಕ್ಷದ ಶಾಸಕರು ಕೂಡ ಅಭಿವೃದ್ಧಿಗೆ ಹಣ ಇಲ್ಲದೆ ಕೊರಗುತ್ತಿದ್ದಾರೆ: ರಂಭಾಪುರಿ ಶ್ರೀಗಳು

0
Spread the love

ಚಿಕ್ಕಮಗಳೂರು: ಆಡಳಿತ ಪಕ್ಷದ ಶಾಸಕರು ಕೂಡ ಅಭಿವೃದ್ಧಿಗೆ ಹಣ ಇಲ್ಲದೆ ಕೊರಗುತ್ತಿದ್ದಾರೆ ಎಂದು ರಂಭಾಪುರಿ ಶ್ರೀಗಳು ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಬಾಳೆಹೊನ್ನೂರಿನಲ್ಲಿ ಮಾತನಾಡಿದ ಅವರು,

Advertisement

ರಾಜ್ಯ ಸರ್ಕಾರ ಹಿಂದಿನ ಸರ್ಕಾರದ ಹಲವು ಯೋಜನೆಗಳನ್ನು ತಡೆಹಿಡಿದಿದೆ. ಬಜೆಟ್‍ನಲ್ಲೂ ಮಠ ಮಂದಿರಗಳಿಗೆ ವಿಶೇಷವಾದ ಅನುದಾನ ಕೊಟ್ಟಿಲ್ಲ. ಆಡಳಿತ ಪಕ್ಷದ ಶಾಸಕರು ಕೂಡ ಅಭಿವೃದ್ಧಿಗೆ ಹಣ ಇಲ್ಲದೆ ಕೊರಗುತ್ತಿದ್ದಾರೆ. ಜನರ ಬಳಿ ಹೋಗುವುದು ಕಷ್ಟವಾಗಿದೆ ಎಂದು ಕಾಂಗ್ರೆಸ್ ಶಾಸಕರೇ ಹೇಳುತ್ತಾರೆ ಎಂದಿದ್ದಾರೆ.

ಇನ್ನೂ ರಾಜ್ಯದಲ್ಲಿ ವೀರಶೈವ – ಲಿಂಗಾಯುತರ ಸಭೆ ವಿಜಯೇಂದ್ರ ಅಭಿಮಾನಿಗಳು ಮಾಡುತ್ತಿರಬಹುದು. ವಿಜಯೇಂದ್ರ ಅವರೇ ಮಾಡಿಸುತ್ತಿದ್ದಾರೆ ಎನ್ನುವ ಭಾವನೆ ಇಲ್ಲ. ಅಭಿಮಾನಿಗಳು ಅಭಿಮಾನದಿಂದ ಮಾಡಿರಬಹುದು.

ಒಳ್ಳೆಯ ನಾಯಕತ್ವ, ರಾಜ್ಯದ ಹಿತ ಚಿಂತನೆ ಕಾಪಾಡಲು ಜನರ ಸಹಕಾರ ಅವಶ್ಯಕ. ವಿಜಯೇಂದ್ರ ವಿಚಾರದಲ್ಲೂ ಒಳ್ಳೆಯದು ಮಾಡಿದಾಗ ಹೆಮ್ಮೆಯಿಂದ ಹೇಳುತ್ತೇವೆ. ಅಲ್ಲದ ಮಾರ್ಗ ತುಳಿದಾಗ ತಿದ್ದಿಕೊಳ್ಳಲು ಸೂಚನೆ ನೀಡುವುದಕ್ಕೂ ಹಿಂದೇಟು ಹಾಕಲ್ಲ ಎಂದಿದ್ದಾರೆ.

 


Spread the love

LEAVE A REPLY

Please enter your comment!
Please enter your name here